ನವದೆಹಲಿ: ಕೋವಿಡ್ ಚಿಕಿತ್ಸೆ ಪ್ರೋಟೋಕಾಲ್ನಿಂದ ಪ್ಲಾಸ್ಮಾ ಥೆರಪಿಯನ್ನು ಕೇಂದ್ರ ಸರ್ಕಾರ ಕೈಬಿಟ್ಟಿದೆ. ಸೌಮ್ಯ, ಮಧ್ಯಮ ಮತ್ತು ತೀವ್ರ ಕೋವಿಡ್ ಪ್ರಕರಣಗಳ ನಿರ್ವಹಣೆಗಾಗಿ ಕೋವಿಡ್ ರಾಷ್ಟ್ರೀಯ ಕಾರ್ಯಪಡೆ ನಿನ್ನೆ ಹೊಸ ವೈದ್ಯಕೀಯ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಹೊಸ ಮಾರ್ಗಸೂಚಿಗಳ ಅಡಿಯಲ್ಲಿ ಪ್ಲಾಸ್ಮಾ ಚಿಕಿತ್ಸೆಯ ಉಲ್ಲೇಖವನ್ನು ತೆಗೆದುಹಾಕಲಾಗಿದೆ. ಏಮ್ಸ್, ಐಸಿಎಂಆರ್-ಕೋವಿಡ್ -19 ರಾಷ್ಟ್ರೀಯ ಕಾರ್ಯಪಡೆ ಮತ್ತು ಕೇಂದ್ರ ಆರೋಗ್ಯ ಸಚಿವಾಲಯದ ಜಂಟಿ ಮಾನಿಟರಿಂಗ್ ಗ್ರೂಪ್ನ ತಜ್ಞರ ಶಿಫಾರಸುಗಳ ಆಧಾರದ ಮೇಲೆ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ.
ಕೋವಿಡ್-19 ಗಾಗಿ ಐಸಿಎಂಆರ್-ರಾಷ್ಟ್ರೀಯ ಕಾರ್ಯಪಡೆಯ ಸದಸ್ಯರು ಶುಕ್ರವಾರ ಸಭೆ ಸೇರಿದ್ದು, ಪ್ಲಾಸ್ಮಾ ಚಿಕಿತ್ಸೆಯ ಪರಿಣಾಮಕಾರಿತ್ವವನ್ನು ಚರ್ಚಿಸಿದರು. ಪ್ಲಾಸ್ಮಾ ಥೆರಪಿ ಕಳೆದ ವರ್ಷ ಸಾಂಕ್ರಾಮಿಕ ರೋಗ ಕಾಣಿಸಿಕೊಂಡ ಬಳಿಕ ಮುನ್ನಲೆಗೆ ಬಂದಿತ್ತು. ಆದರೆ ಈ ಸಭೆಯಲ್ಲಿ, ಕಾರ್ಯಪಡೆಯ ಎಲ್ಲಾ ಸದಸ್ಯರು ವಯಸ್ಕ ಕೋವಿಡ್ ರೋಗಿಗಳ ಕ್ಲಿನಿಕಲ್ ಗೈಡೆನ್ಸ್ನಿಂದ ಪ್ಲಾಸ್ಮಾ ಬಳಕೆಯನ್ನು ತೆಗೆದುಹಾಕುವ ಪರವಾಗಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕುರಿತು ಶೀಘ್ರದಲ್ಲೇ ಸಲಹೆ ಬಿಡುಗಡೆ ಮಾಡುವುದಾಗಿ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐಸಿಎಂಆರ್) ಹೇಳಿದೆ.
ಚೇತರಿಸಿಕೊಂಡ ರೋಗಿಯ ರಕ್ತದಿಂದ ಪ್ಲಾಸ್ಮಾ ತೆಗೆದು ಅದನ್ನು ಚಿಕಿತ್ಸೆ ಪಡೆಯುತ್ತಿರುವವನಿಗೆ ಕೋವಿಡ್ ರೋಗಿಗೆ ನೀಡುವುದು ಪ್ಲಾಸ್ಮ ಥೆರಪಿ. ರೋಗ ನಿರೋಧಕದ ವರ್ಗಾವಣೆಯನ್ನು ಒಳಗೊಂಡಿರುವ ಪ್ಲಾಸ್ಮಾ ಚಿಕಿತ್ಸೆಯು ಪರಿಣಾಮಕಾರಿಯಾಗಿ ಕಂಡುಬಂದಿಲ್ಲ ಎಂದು ತಜ್ಞರು ಹೇಳಿದ್ದಾರೆ.
ಕೋವಿಡ್-19 ನಿಂದ ಚೇತರಿಸಿಕೊಂಡವರ ಪ್ಲಾಸ್ಮಾ ಬಳಕೆ ವಿರುದ್ಧ ಎಚ್ಚರಿಕೆ ನೀಡಿ ವೈದ್ಯರ ಗುಂಪೊಂದು ಪ್ರಧಾನ ವೈಜ್ಞಾನಿಕ ಸಲಹೆಗಾರ ಕೆ ವಿಜಯ್ ರಾಘವನ್ ಅವರಿಗೆ ಪತ್ರ ಬರೆದ ಕೆಲವೇ ದಿನಗಳಲ್ಲಿ ಈ ಬೆಳವಣಿಗೆ ಸಂಭವಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.