News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಸೋತರೂ ಚುನಾವಣೆ ವೇಳೆ ನೀಡಿದ್ದ ಭರವಸೆ ಈಡೇರಿಸಿದ ಮೆಟ್ರೋಮ್ಯಾನ್‌ ಶ್ರೀಧರನ್

ತಿರುವನಂತಪುರಂ: ಮೆಟ್ರೊಮ್ಯಾನ್ ಇ ಶ್ರೀಧರನ್ ಅವರು ಕೇರಳ ವಿಧಾನಸಭಾ ಚುನಾವಣೆಯಲ್ಲಿ ಸೋತರೂ ಕೂಡ ಚುನಾವಣೆ ವೇಳೆ ತಮ್ಮ ಕ್ಷೇತ್ರದ ಮತದಾರರಿಗೆ ನೀಡಿದ್ದ ಭರವಸೆಯನ್ನು ಈಡೇರಿಸಿದ್ದಾರೆ. ಸೋತರೂ ಅಥವಾ ಗೆದ್ದರೂ ವಿದ್ಯುತ್ ಸಂಪರ್ಕವನ್ನು ನೀಡುವುದಾಗಿ ಹೇಳಿದ್ದರು, ಅದರಂತೆ ಅವರು ತಮ್ಮ ಸ್ವಂತ ಹಣದಿಂದ ವಿದ್ಯುತ್‌ ಸಂಪರ್ಕ ಒದಗಿಸಿದ್ದಾರೆ.

ಶ್ರೀಧರನ್ ಅವರು ಪಾಲಕ್ಕಡ್ ಕ್ಷೇತ್ರದಲ್ಲಿ ಚುನಾವಣೆಗೆ ನಿಂತಿದ್ದರು, ಕಾಂಗ್ರೆಸ್ ಅಭ್ಯರ್ಥಿ ಶಫಿ ಪರಂಬಿಲ್ ಅವರ ವಿರುದ್ಧ ಸುಮಾರು 4,000 ಮತಗಳ ಅಂತರದಿಂದ ಪರಾಜಯಗೊಂಡಿದ್ದಾರೆ.

ತನ್ನ ಚುನಾವಣಾ ಅಭಿಯಾನದ ಸಮಯದಲ್ಲಿ ಶ್ರೀಧರನ್ ಮಧುರವೀರನ್ ಕಾಲೋನಿಯ ನಿವಾಸಿಗಳಿಗೆ ತಾನು ಗೆದ್ದರೂ ಸೋತರೂ ಎಲ್ಲರಿಗೂ ವಿದ್ಯುತ್ ಸಂಪರ್ಕ ಸಿಗುತ್ತದೆ ಎಂದು ಭರವಸೆ ನೀಡಿದ್ದರು. ಆ ಪ್ರದೇಶದ ಕೆಲವು ಕುಟುಂಬಗಳು ವಿದ್ಯುತ್ ಸಂಪರ್ಕವನ್ನು ಹೊಂದಿರಲಿಲ್ಲ ಮತ್ತು ಕೆಲ ಕುಟುಂಬಗಳು ಬಾಕಿ ಬಿಲ್ ಪಾವತಿಸದ ಕಾರಣ ಅವರ ಸಂಪರ್ಕವನ್ನು ಕಡಿತಗೊಳಿಸಲಾಗಿತ್ತು.

ಹೀಗಾಗಿ ಈ ಮಂಗಳವಾರ ಶ್ರೀಧರನ್ ತಮ್ಮ ವೈಯಕ್ತಿಕ ಉಳಿತಾಯದಿಂದ 81,525 ರೂ.ಗಳ ಚೆಕ್ ಅನ್ನು ಕೆಎಸ್ಇಬಿ ಅಸಿಸ್ಟೆಂಟ್ ಎಂಜಿನಿಯರ್ ಅವರಿಗೆ ಕಳುಹಿಸಿದ್ದಾರೆ. ಈ ಮೂಲಕ 11 ಕುಟುಂಬಗಳು ಹೊಸ ವಿದ್ಯುತ್ ಸಂಪರ್ಕವನ್ನು ಪಡೆಯುವುದನ್ನು ಅವರು ಖಚಿತಪಡಿಸಿದ್ದಾರೆ.

ಶ್ರೀಧರನ್ ಅವರು ಭಾರತದ ಶ್ರೇಷ್ಠ ಎಂಜಿನಿಯರ್‌ಗಳಲ್ಲಿ ಒಬ್ಬರೆಂದು ಪರಿಗಣಿಸಲ್ಪಟ್ಟಿದ್ದಾರೆ, ಅವರು ತಮ್ಮ ವೃತ್ತಿಜೀವನದಲ್ಲಿ ದೆಹಲಿ ಮೆಟ್ರೋ ಮತ್ತು ಕೊಂಕಣ ರೈಲ್ವೆಯಂತಹ ಸವಾಲಿನ ಮೆಗಾ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಕೋಲ್ಕತಾ ಮೆಟ್ರೋವನ್ನು ಯೋಜಿಸಿ ಅನುಷ್ಠಾನಗೊಳಿಸಿದ ಮತ್ತು ಕೊಚ್ಚಿನ್ ಶಿಪ್‌ಯಾರ್ಡ್‌ ನಿರ್ಮಾಣದ ಕೀರ್ತಿ ಅವರಿಗೆ ಸಲ್ಲುತ್ತದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top