ನವದೆಹಲಿ: ಕೋವಿಡ್ -19 ರ ಮೂರನೇ ಅಲೆ ದೇಶವನ್ನು ಅಪ್ಪಳಿಸುವ ನಿರೀಕ್ಷೆಯಿರುವುದರಿಂದ ಕೇಂದ್ರ ಮತ್ತು ರಾಜ್ಯಗಳು ಮಕ್ಕಳು ಮತ್ತು ನವಜಾತ ಶಿಶುಗಳನ್ನು ರಕ್ಷಿಸಲು ತಮ್ಮ ಸಿದ್ಧತೆಗಳನ್ನು ಹೆಚ್ಚಿಸಿಕೊಳ್ಳಬೇಕು ಎಂದು ಮಕ್ಕಳ ಹಕ್ಕುಗಳ ಸಂರಕ್ಷಣೆಗಾಗಿನ ರಾಷ್ಟ್ರೀಯ ಆಯೋಗ (ಎನ್ಸಿಪಿಸಿಆರ್) ಕರೆ ನೀಡಿದೆ.
ಈ ಬಗ್ಗೆ ಎನ್ಸಿಪಿಸಿಆರ್ ಮುಖ್ಯಸ್ಥ ಪ್ರಿಯಾಂಕ್ ಕನೂಂಗೊ ಅವರು ಕೇಂದ್ರ ಆರೋಗ್ಯ ಕಾರ್ಯದರ್ಶಿ ರಾಜೇಶ್ ಭೂಷಣ್ ಅವರಿಗೆ ಪತ್ರವನ್ನು ಬರೆದಿದ್ದು, ರಾಷ್ಟ್ರೀಯ ತುರ್ತು ಸಾರಿಗೆ ಸೇವೆಯನ್ನು ಮರುಸಂಘಟಿಸುವ ಮಹತ್ವವನ್ನು ಒತ್ತಿ ಹೇಳಿದ್ದಾರೆ. ಅಲ್ಲದೇ, ನವಜಾತ ಶಿಶುಗಳು ಮತ್ತು ಮಕ್ಕಳಿಗಾಗಿ ವಿಶೇಷವಾಗಿ ತಯಾರಿಸಿದ ಸೇವೆ ಮತ್ತು ಆಂಬುಲೆನ್ಸ್ಗಳಿಗೆ ಅಗತ್ಯ ನಿರ್ದೇಶನಗಳನ್ನು ನೀಡುವಂತೆ ಕೋರಿದ್ದಾರೆ.
ಮಕ್ಕಳಲ್ಲಿ ಸಾಂಕ್ರಾಮಿಕ ತಡೆಗಟ್ಟುವಿಕೆ ಮತ್ತು ಕ್ಲಿನಿಕಲ್ ನಿರ್ವಹಣೆಗಾಗಿ ಐಸಿಎಂಆರ್ ಹೆಚ್ಚುವರಿ ಪ್ರೋಟೋಕಾಲ್ಗಳು ಅಥವಾ ಮಾರ್ಗಸೂಚಿಗಳನ್ನು ಅಭಿವೃದ್ಧಿಪಡಿಸಿದ್ದರೆ ಅದನ್ನು ಆಯೋಗಕ್ಕೆ ನೀಡುವಂತೆ ಕನೂಂಗೊ ಅವರು ಆರೋಗ್ಯ ಸಚಿವಾಲಯವನ್ನು ಕೇಳಿದ್ದಾರೆ.
ಮೂರನೇ ಅಲೆಯಲ್ಲಿ ಶಿಶುಗಳು ಮತ್ತು ಮಕ್ಕಳಿಗೆ ಉಂಟಾಗುವ ಹೆಚ್ಚಿನ ಅಪಾಯವನ್ನು ಗಮನದಲ್ಲಿಟ್ಟುಕೊಂಡು ಎನ್ಸಿಪಿಸಿಆರ್ ನವಜಾತ ಶಿಶುವಿನ ತೀವ್ರ ನಿಗಾ ಘಟಕಗಳ ಕಾರ್ಯನಿರ್ವಹಣೆಯ ಬಗ್ಗೆ, ಮಕ್ಕಳ ತೀವ್ರ ನಿಗಾ ಘಟಕಗಳು ಮತ್ತು ವಿಶೇಷವಾಗಿ ನವಜಾತ ಶಿಶುವಿನ ಆರೈಕೆ ಘಟಕಗಳ ಬಗ್ಗೆ ಮಾಹಿತಿ ಸಂಗ್ರಹಿಸಲು ಒಂದು ಫಾರ್ಮ್ಯಾಟ್ ಅನ್ನು ಅಭಿವೃದ್ಧಿಪಡಿಸಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.