ನವದೆಹಲಿ: ಖ್ಯಾತ ಪರಿಸರವಾದಿ, ಚಿಪ್ಕೊ ಚಳುವಳಿಯ ಮುಖಂಡ ಮತ್ತು ಪದ್ಮವಿಭೂಷಣ ಪ್ರಶಸ್ತಿ ಪುರಸ್ಕೃತ ಸುಂದರ್ಲಾಲ್ ಬಹುಗುಣ ಅವರು ಶುಕ್ರವಾರ ಏಮ್ಸ್ ರಿಷಿಕೇಶದಲ್ಲಿ ಇಹಲೋಕ ತ್ಯಜಿಸಿದ್ದಾರೆ. ಅವರು ಕೋವಿಡ್-19 ಸಾಂಕ್ರಾಮಿಕದಿಂದ ಬಳಲುತ್ತಿದ್ದರು.
94 ವರ್ಷ ವಯಸ್ಸಿನವರಾಗಿದ್ದ ಅವರು, ಪರಿಸರವಾದದ ಬಗ್ಗೆ ಅತೀವ ಒಲವು ಹೊಂದಿದ್ದವರು. ಪರಿಸರ ಸಂರಕ್ಷಣೆಗಾಗಿ ತಮ್ಮ ಇಡೀ ಜೀವನವನ್ನು ಸವೆಸಿದವರು.
ಜ್ವರ ಇದೆ ಎಂದು ಹೇಳಿದ ಬಳಿಕ ಅವರ ಕುಟುಂಬ ಅವರನ್ನು ಆಸ್ಪತ್ರೆಗೆ ದಾಖಲಿಸಿತ್ತು.ಕೋವಿಡ್-19 ಪರೀಕ್ಷೆಯು ಪಾಸಿಟಿವ್ ಬಂದ ನಂತರ ಚಿಕಿತ್ಸೆ ನೀಡಲಾಯಿತು, ಆದರೆ ದುರದೃಷ್ಟವಶಾತ್ ಅವರು ಚೇತರಿಸಿಕೊಳ್ಳಲಿಲ್ಲ.
ಅರಣ್ಯ ನಾಶವನ್ನು ತಡೆಯಲೆಂದೇ ಅವರು 1973ರಲ್ಲಿ ಚಿಪ್ಕೋ ಚಳುವಳಿಯನ್ನು ಉತ್ತರಪ್ರದೇಶದಲ್ಲಿ ಆರಂಭಿಸಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.