ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗಗಳಲ್ಲಿ ಕೊರೋನಾ ಸೋಂಕಿತರನ್ನು ಕೊರೋನಾ ಕೇರ್ ಸೆಂಟರ್ಗಳಿಗೆ ಸ್ಥಳಾಂತರ ಮಾಡುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ವ್ಯವಸ್ಥೆ ಕೈಗೊಳ್ಳುತ್ತಿದೆ.
ಈ ಹಿನ್ನೆಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಉಚಿತ ವಾಹನಗಳ ವ್ಯವಸ್ಥೆ ಕಲ್ಪಿಸಲು ಪೂರಕ ವ್ಯವಸ್ಥೆ ಕಲ್ಪಿಸುತ್ತಿದೆ. ಖಾಸಗಿ ಸಹಭಾಗಿತ್ವದಲ್ಲಿ ಈ ವ್ಯವಸ್ಥೆ ಕಲ್ಪಿಸಲು ಇಲಾಖೆಯ ಅಧಿಕಾರಿಗಳು ಎದುರು ನೋಡುತ್ತಿದ್ದಾರೆ.
ರಾಜ್ಯದಲ್ಲಿ 6 ಸಾವಿರಗಳಷ್ಟು ಗ್ರಾಮ ಪಂಚಾಯತ್ಗಳಿದ್ದು, ಮುಂದಿನ ಕೆಲವೇ ತಿಂಗಳುಗಳಲ್ಲಿ ಉಚಿತ ವಾಹನ ಸೌಲಭ್ಯಗಳನ್ನು ಕಲ್ಪಿಸಲಾಗುವುದು ಎಂದು ಇಲಾಖೆ ಹೇಳಿದೆ. ಹಾಗೆಯೇ ಪಂಚಾಯತ್ಗಳಿಗೆ ನೀಡಲಾಗಿರುವ 50 ಸಾವಿರ ರೂ. ಗಳನ್ನು ಸಹ ವಿವಿಧ ವೆಚ್ಚಗಳನ್ನು ಭರಿಸಲು ಬಳಕೆ ಮಾಡುವಂತೆ ಇಲಾಖೆ ಸೂಚಿಸಿದೆ. ಹಾಗೆಯೇ ಜನರಿಗೆ ಲಸಿಕೆ ಪಡೆಯಲು ಅನುಕೂಲವಾಗುವಂತೆ ಸ್ಥಳೀಯ ಟಾಸ್ಕ್ಫೋರ್ಸ್ಗಳಿಗೆ ಜವಾಬ್ದಾರಿ ವಹಿಸಲಾಗಿರುವುದಾಗಿ ಇಲಾಖೆಯ ಮೂಲಗಳು ಹೇಳಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.