ನವದೆಹಲಿ: ಪಶ್ಚಿಮ ಬಂಗಾಳದಲ್ಲಿ ಚುನಾವಣೆ ಫಲಿತಾಂಶದ ಬಳಿಕ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ವಿವಿಧ ಕ್ಷೇತ್ರಗಳ ಸುಮಾರು 146 ಗಣ್ಯ ನಾಗರಿಕರು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರಿಗೆ ಸಹಿ ಮಾಡಿ ಪಿಟಿಷನ್ ಸಲ್ಲಿಸಿದ್ದಾರೆ.
ಪಿಟಿಷನ್ಗೆ 146 ಉನ್ನತ ನಿವೃತ್ತ ಅಧಿಕಾರಿಗಳು ಸಹಿ ಹಾಕಿದ್ದಾರೆ, ಇದರಲ್ಲಿ 17 ನ್ಯಾಯಾಧೀಶರು, 63 ಅಧಿಕಾರಿಗಳು, 10 ರಾಯಭಾರಿಗಳು ಮತ್ತು 56 ಸಶಸ್ತ್ರ ಪಡೆಗಳ ಅಧಿಕಾರಿಗಳು ಸೇರಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಯ ನಂತರ ನಡೆದ ರಾಜಕೀಯ ಹತ್ಯೆಗಳು ಮತ್ತು ರಕ್ತಪಾತದ ಬಗ್ಗೆ ಇದರಲ್ಲಿ ಉಲ್ಲೇಖಿಸಲಾಗಿದ್ದು, ಈ ಘಟನೆಯು ಪ್ರತಿ ಭಾಗದಲ್ಲೂ ಅಹಿಂಸೆಯನ್ನು ಸ್ಥಾಪಿಸುವತ್ತ ಗಮನಿಸಬೇಕಾದ ಅಗತ್ಯವನ್ನು ಎತ್ತಿ ತೋರಿಸಿದೆ ಎಂದಿದ್ದಾರೆ. ಪ್ರತೀಕಾರ, ಆಕ್ರಮಣಶೀಲತೆ ಮತ್ತು ಪ್ರತೀಕಾರವನ್ನು ಅಂತರ್ಗತವಾಗಿ ತಿರಸ್ಕರಿಸುವ ಪ್ರಜಾಪ್ರಭುತ್ವ ಪ್ರಕ್ರಿಯೆಯನ್ನು ಗೌರವಿಸಬೇಕು ಎಂದು ಇಲ್ಲಿ ಗಣ್ಯರು ಅಭಿಪ್ರಾಯಪಟ್ಟಿದ್ದಾರೆ.
ರಾಜಕೀಯ ಹಿಂಸಾಚಾರವನ್ನು ಪ್ರಜಾಪ್ರಭುತ್ವದ ಮೌಲ್ಯಗಳ ಕಗ್ಗೊಲೆ ಎಂದು ಅರ್ಜಿಯಲ್ಲಿ ಹೇಳಲಾಗಿದ್ದು, ಪ್ರಜಾಪ್ರಭುತ್ವದ ಮೌಲ್ಯಗಳನ್ನು ಯಾವುದೇ ವೆಚ್ಚದಲ್ಲಿಯೂ ಸಂರಕ್ಷಿಸಬೇಕು ಎಂದು ಪ್ರತಿಪಾದಿಸಿದ್ದಾರೆ.
ಕಾನೂನು ಮತ್ತು ಸುವ್ಯವಸ್ಥೆ ರಾಜ್ಯ ವಿಷಯವಾಗಿದೆ ಎಂದು ಹೇಳಿರುವ ಗಣ್ಯ ನಾಗರಿಕರು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಿಕೊಳ್ಳಲು, ಹಿಂಸಾಚಾರವನ್ನು ನಿಗ್ರಹಿಸಲು ಮತ್ತು ತನ್ನ ಎಲ್ಲ ವರ್ಗದ ಜನರಲ್ಲಿ ಶಾಂತಿ ಮತ್ತು ಸೌಹಾರ್ದತೆಯನ್ನು ಖಚಿತಪಡಿಸಿಕೊಳ್ಳಲು ಸಾಂವಿಧಾನಿಕ ಆಶಯದಂತೆ ಪಶ್ಚಿಮ ಬಂಗಾಳ ಸರ್ಕಾರವು ಕಾರ್ಯನಿರ್ವಹಿಸಬೇಕು ಎಂದು ವಿನಂತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.