ನವದೆಹಲಿ: ದೇಶದಲ್ಲಿ ಕಾಣಿಸಿಕೊಂಡಿರುವ ಎರಡನೇ ಅಲೆಯ ಕೊರೋನಾವೈರಸ್ ಹೊಸ ಹೊಸ ಸವಾಲುಗಳನ್ನು ದೇಶದ ಮುಂದೆ ತೆರೆದಿಟ್ಟಿದೆ. ವೈರಸ್ ಸೋಂಕಿತರಲ್ಲಿ ಕಾಣಿಸಿಕೊಂಡಿರುವ ಕಪ್ಪು ಶಿಲೀಂಧ್ರ ಮತ್ತು ಬಿಳಿ ಶಿಲೀಂಧ್ರ ಸಮಸ್ಯೆಗಳಿಗೆ ಪರಿಹಾರವನ್ನು ಹುಡುಕುವ ಕಾರ್ಯದಲ್ಲಿ ದೇಶ ಕಾರ್ಯೋನ್ಮುಖವಾಗಿದೆ.
ಮುಕಾರ್ಮೈಕೋಸಿಸ್ ಎಂದು ಕರೆಯಲ್ಪಡುವ ಈ ಕಾಯಿಲೆಯ ಚಿಕಿತ್ಸೆಗೆ ಔಷಧಿಗಳ ಬೇಡಿಕೆ ಹೆಚ್ಚಾಗಿದೆ.
ಔಷಧೀಯ ಹೆಚ್ಚಿದ ಬೇಡಿಕೆಯ ಕುರಿತು ಮಾತನಾಡರುವ ಕಾರ್ಯದರ್ಶಿ (ಫಾರ್ಮಾ) ಎಸ್ ಅಪರ್ಣಾ ಅವರು, ದೇಶದೊಳಗೆ ಆಂಫೊಟೆರಿಸಿನ್ ಬಿ ತಯಾರಿಸಲು ಇನ್ನೂ ಐದು ತಯಾರಕರಿಗೆ ಪರವಾನಗಿ ನೀಡಲಾಗಿದೆ ಎಂದು ತಿಳಿಸಿದರು.
ಆಂಫೊಟೆರಿಸಿನ್-ಬಿ ಮತ್ತು ರೆಮ್ಡೆಸಿವಿರ್ನಂತಹ ಕ್ರಿಟಿಕಲ್ ಮೆಡಿಸಿನ್ಗಳ ಉತ್ಪಾದನೆಯನ್ನು ಹೆಚ್ಚಿಸಲು ಎಪಿಐಗಳ ದೇಶೀಯ ಉತ್ಪಾದನೆಯನ್ನು ಹೆಚ್ಚಿಸಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಹೆಚ್ಚೆಚ್ಚು ಕಂಪನಿಗಳಿಗೆ ಈ ಔಷಧಿಯನ್ನು ಉತ್ಪಾದಿಸಲು ಅನುಮತಿ ನೀಡುವ ಮೂಲಕ ಪೂರೈಕೆಯನ್ನು ಹೆಚ್ಚಿಸಲು ಸರ್ಕಾರ ಕ್ರಮ ಕೈಗೊಳ್ಳುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.