ನವದೆಹಲಿ: ದೇಶದಲ್ಲಿ ಕೋವಿಡ್-19 ನಿಂದಾಗಿ ಸಾವನ್ನಪ್ಪಿದವರ ಸಂಖ್ಯೆಯನ್ನು ಕೇಂದ್ರ ಸರ್ಕಾರವು ಕಡಿಮೆ ಮಾಡಿದೆ ಎಂಬ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಆರೋಪಕ್ಕೆ ಕೇಂದ್ರ ಆರೋಗ್ಯ ಸಚಿವ ಹರ್ಷವರ್ಧನ್ ಅವರು ಟ್ವೀಟ್ ಮೂಲಕ ತಿರುಗೇಟು ನೀಡಿದ್ದಾರೆ.
ಗಾಂಧಿಯವರಿಗೆ ತೀಕ್ಷ್ಣ ಉತ್ತರವನ್ನು ನೀಡಿದ ಹರ್ಷವರ್ಧನ್, ಶವಗಳ ಮೇಲೆ ರಾಜಕೀಯ ಮಾಡುವುದು ಕಾಂಗ್ರೆಸ್ ಶೈಲಿ. ಅವರು ಭಾರತ ಸರ್ಕಾರಕ್ಕಿಂತ ವಿದೇಶಿ ಪ್ರಕಟಣೆಯನ್ನು ಹೆಚ್ಚಾಗಿ ನಂಬುತ್ತಾರೆ ಎಂದಿದ್ದಾರೆ.
“ಶವಗಳ ಮೇಲೆ ರಾಜಕೀಯ ಮಾಡುವುದು ಕಾಂಗ್ರೆಸ್ ಶೈಲಿ. ಮರಗಳಿಂದ ರಣಹದ್ದುಗಳು ಕಣ್ಮರೆಯಾಗುತ್ತಿದ್ದರೂ, ಅವುಗಳ ಸ್ಪೂರ್ತಿಯನ್ನು ಭೂಮಿ ಮೇಲಿನ ರಣಹದ್ದುಗಳು ಹೀರಿಕೊಳ್ಳುತ್ತಿವೆ. ದೆಹಲಿಗಿಂತ ಹೆಚ್ಚಾಗಿ ರಾಹುಲ್ ಗಾಂಧಿ ನ್ಯೂಯಾರ್ಕ್ ಅನ್ನು ನಂಬುತ್ತಾರೆ. ಶವಗಳ ಮೇಲೆ ರಾಜಕೀಯ ಮಾಡುವುದನ್ನು ಭೂಮಿ ಮೇಲಿನ ರಣಹದ್ದುಗಳಿಂದ ಕಲಿಯಬೇಕು” ಎಂದು ಹರ್ಷವರ್ಧನ್ ಟ್ವಿಟ್ ಮಾಡಿದ್ದಾರೆ.
ನ್ಯೂಯಾರ್ಕ್ ಪ್ರಕಟಿಸಿದ ವರದಿಯನ್ನು ಮುಂದಿಟ್ಟುಕೊಂಡು ರಾಹುಲ್ ಗಾಂಧಿ ಕೇಂದ್ರ ಸರ್ಕಾರ ಸಾವುಗಳ ಸಂಖ್ಯೆಯ ಬಗ್ಗೆ ಸುಳ್ಳು ಹೇಳುತ್ತಿದೆ ಎಂದು ಮಾಡಿದ ಟ್ವಿಟ್ಗೆ ಅವರು ಈ ಪ್ರತಿಕ್ರಿಯೆ ನೀಡಿದ್ದಾರೆ.
लाशों पर राजनीति, @INCIndia स्टाइल !
पेड़ों पर से गिद्ध भले ही लुप्त हो रहे हों, लेकिन लगता है उनकी ऊर्जा धरती के गिद्धों में समाहित हो रही है।@RahulGandhi जी को #Delhi से अधिक #NewYork पर भरोसा है।
लाशों पर राजनीति करना कोई धरती के गिद्धों से सीखे।@PMOIndia @BJP4India https://t.co/29D0yWU5wS
— Dr Harsh Vardhan (@drharshvardhan) May 26, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.