ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಲಾಕ್ಡೌನ್ನಿಂದಾಗಿ ತೊಂದರೆಗೀಡಾಗಿರುವ 11 ವರ್ಗಗಳ 3.30 ಲಕ್ಷ ಅಸಂಘಟಿತ ಕಾರ್ಮಿಕರ ಅನುಕೂಲಕ್ಕಾಗಿ ರಾಜ್ಯ ಸರ್ಕಾರದ ಪರಿಹಾರ ಪ್ಯಾಕೇಜ್ ಅಡಿಯಲ್ಲಿ ತಲಾ 2 ಸಾವಿರ ಗಳಂತೆ ಪರಿಹಾರ ವಿತರಿಸುವ ನಿಟ್ಟಿನಲ್ಲಿ 66.09 ಕೋಟಿ ರೂ. ಗಳನ್ನು ಕಾರ್ಮಿಕ ಇಲಾಖೆ ಬಿಡುಗಡೆ ಮಾಡಿದೆ.
ರಾಜ್ಯದ ಅಗಸರು, ಕ್ಷೌರಿಕರು, ಮನೆ ಕೆಲಸದವರು, ಟೈಲರ್ಗಳು, ಮೆಕ್ಯಾನಿಕ್, ಚಿಂದಿ ಆಯುವವರು, ಹಮಾಲರು, ಅಕ್ಕಸಾಲಿಗರು, ಕಮ್ಮಾರ, ಕುಂಬಾರ, ಭಟ್ಟಿ ಕಾರ್ಮಿಕರನ್ನು ಗಮನದಲ್ಲಿಟ್ಟುಕೊಂಡು ಈ ಅನುದಾನ ಬಿಡುಗಡೆ ಮಾಡಲಾಗಿದೆ. ಈ ಅನುದಾನದ ಮುಖೇನ ತಲಾ 2000 ರೂ. ಗಳಂತೆ ವಿತರಣೆ ಮಾಡುವುದಕ್ಕೆ ಅಗತ್ಯ ಕ್ರಮವನ್ನು ಕಾರ್ಮಿಕ ಇಲಾಖೆ ಕೈಗೊಂಡಿದೆ.
ಇದಕ್ಕಾಗಿ 62. 33 ಕೋಟಿ ರೂ. ಗಳನ್ನು ಕಾರ್ಖಾನೆಗಳ ಪರಿವೀಕ್ಷಕರಿಗೆ ಒದಗಿಸಿದ ಅನುದಾನದಿಂದ ಮತ್ತು ಶ3.75;ಕೋಟಿ ರೂ. ಗಳನ್ನು ರಾಜ್ಯ ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿಗೆ ಒದಗಿಸಲಾದ ಅನುದಾನದಿಂದ ಈ ಪರಿಹಾರ ಪ್ಯಾಕೇಜ್ ಬಿಡುಗಡೆ ಮಾಡಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.