ನವದೆಹಲಿ: ಭಾರತದ ಸಂಪೂರ್ಣ ಅರ್ಹ ಜನಸಂಖ್ಯೆಗೆ ಈ ವರ್ಷದ ಅಂತ್ಯದ ವೇಳೆಗೆ ಕೋವಿಡ್-19 ವಿರುದ್ಧ ಲಸಿಕೆ ನೀಡಲಾಗುತ್ತದೆ ಎಂದು ಕೇಂದ್ರವು ಸೋಮವಾರ ಸುಪ್ರೀಂಕೋರ್ಟ್ಗೆ ತಿಳಿಸಿದೆ. ಕೋವಿಡ್ -19 ಬಿಕ್ಕಟ್ಟಿನ ಕುರಿತು ಸು-ಮೋಟು ಪ್ರಕರಣದ ವಿಚಾರಣೆಯನ್ನಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್, ನ್ಯಾಯಮೂರ್ತಿ ಭಟ್ ಮತ್ತು ನ್ಯಾಯಮೂರ್ತಿ ರಾವ್ ಅವರನ್ನೊಳಗೊಂಡ ಮೂವರು ನ್ಯಾಯಾಧೀಶರ ಪೀಠ ನಡೆಸಿದೆ.
ವಿಚಾರಣೆಯ ಸಮಯದಲ್ಲಿ, ಕೋವಿಡ್-19 ವ್ಯಾಕ್ಸಿನೇಷನ್ನ ‘ದ್ವಿ ಬೆಲೆ ನೀತಿ’ ಕುರಿತು ಕೇಂದ್ರವನ್ನು ಸುಪ್ರೀಂಕೋರ್ಟ್ ಪ್ರಶ್ನಿಸಿದ್ದು, ಉತ್ಪಾದಕರಿಂದ ಲಸಿಕೆಗಳನ್ನು ಖರೀದಿಸಲು ರಾಜ್ಯಗಳು ಪರಸ್ಪರ ಪೈಪೋಟಿ ನಡೆಸಬೇಕಾದ ಪರಿಸ್ಥಿತಿಯನ್ನು ಯಾಕೆ ಸೃಷ್ಟಿಸಲಾಗುತ್ತಿದೆ ಎಂದು ಕೇಳಿದೆ. ರಾಷ್ಟ್ರದಾದ್ಯಂತ ಕೊರೊನಾವೈರಸ್ ಲಸಿಕೆಗಳಿಗೆ ‘ಒಂದು-ವ್ಯಾಕ್ಸಿನೇಷನ್ ನೀತಿ’ ಮತ್ತು ‘ಒಂದು ಬೆಲೆ’ ಹೊಂದುವ ಅಗತ್ಯತೆಯ ಬಗ್ಗೆ ಅದು ಒತ್ತಿಹೇಳಿದೆ.
ಈ ಕುರಿತು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ತಯಾರಕರನ್ನು ಮನವೊಲಿಸುವ ಜವಾಬ್ದಾರಿಯನ್ನು ಕೇಂದ್ರ ವಹಿಸಿಕೊಂಡಿದೆ ಮತ್ತು ಪ್ರತಿ ರಾಜ್ಯಕ್ಕೂ ಕೋವಿಡ್-19 ಲಸಿಕೆಯ ನಿಗದಿತ ಬೆಲೆಯನ್ನು ನಿಗದಿಪಡಿಸಲಾಗಿದೆ ಎಂದಿದ್ದಾರೆ.
ವರ್ಷಾಂತ್ಯಕ್ಕೆ ಸಂಪೂರ್ಣ ಅರ್ಹ ಜನಸಂಖ್ಯೆಗೆ ಲಸಿಕೆ ನೀಡಲಾಗುವುದು. ಲಸಿಕೆಗಾಗಿಫೈಝರ್ನಂತಹ ಸಂಸ್ಥೆಗಳೊಂದಿಗೆ ಮಾತುಕತೆ ನಡೆಸಲಾಗುತ್ತಿದೆ ದೆ, ಅದು ಯಶಸ್ವಿಯಾದರೆ 2021 ರ ಅಂತ್ಯದ ವೇಳೆಗೆ ತನ್ನ ಅರ್ಹ ಜನಸಂಖ್ಯೆಗೆ ಲಸಿಕೆ ಹಾಕಲು ಭಾರತಕ್ಕೆ ಸಾಧ್ಯವಾಗುತ್ತದೆ ಎಂದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.