ನವದೆಹಲಿ: ಕೋವಿಡ್ -19 ವಿರುದ್ಧ ‘ಮೇಡ್-ಇನ್-ಇಂಡಿಯಾ’ ಲಸಿಕೆ ಅಭಿವೃದ್ಧಿಪಡಿಸಿದ ಮತ್ತು ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇತರ ಕ್ರಮಗಳನ್ನು ಬಲಪಡಿಸಿದ ಭಾರತೀಯ ವಿಜ್ಞಾನಿಗಳನ್ನು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಶ್ಲಾಘಿಸಿದ್ದಾರೆ.
ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಕೌನ್ಸಿಲ್ ಆಫ್ ಸೈಂಟಿಫಿಕ್ & ಇಂಡಸ್ಟ್ರಿಯಲ್ ರಿಸರ್ಚ್ (ಸಿಎಸ್ಐಆರ್) ಸೊಸೈಟಿಯ ಸಭೆಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ, ಕೋವಿಡ್ ವಿರುದ್ಧ ವಿಜ್ಞಾನಿಗಳು ಹೆಗಲಿಗೆ ಹೆಗಲು ಕೊಟ್ಟು ಶ್ರಮಿಸುತ್ತಿದ್ದಾರೆ ಎಂದಿದ್ದಾರೆ.
“ಕೃಷಿಯಿಂದ ಹಿಡಿದು ಖಗೋಳವಿಜ್ಞಾನ, ವಿಪತ್ತು ನಿರ್ವಹಣೆ, ರಕ್ಷಣಾ ತಂತ್ರಜ್ಞಾನ, ವ್ಯಾಕ್ಸಿನ್, ವರ್ಚುವಲ್ ರಿಯಾಲಿಟಿ ಮುಂತಾದವುಗಳಲ್ಲಿ ಭಾರತವು ಸ್ವಾವಲಂಬಿಯಾಗಲು ಬಯಸುತ್ತದೆ ಮತ್ತು ಪ್ರತಿಯೊಂದು ದಿಕ್ಕಿನಲ್ಲಿಯೂ ಸಬಲೀಕರಣವನ್ನು ಪಡೆಯಲು ಬಯಸುತ್ತದೆ. ಸುಸ್ಥಿರ ಅಭಿವೃದ್ಧಿ ಮತ್ತು ಶುದ್ಧ ಇಂಧನ ಕ್ಷೇತ್ರಗಳಲ್ಲಿ ಭಾರತವು ಜಗತ್ತನ್ನು ಮುನ್ನಡೆಸುತ್ತಿದೆ ”ಎಂದು ಸಭೆಯಲ್ಲಿ ಪ್ರಧಾನಿ ಹೇಳಿದ್ದಾರೆ.
ಜಗತ್ತು ಶತಮಾನದ ಅತಿದೊಡ್ಡ ಸವಾಲನ್ನು ಎದುರಿಸುತ್ತಿದೆ ಎಂದ ಪ್ರಧಾನಿ, ವೈಜ್ಞಾನಿಕ ಸಮುದಾಯವನ್ನು ಹೊಗಳಿದರು ಮತ್ತು ಒಂದು ವರ್ಷದೊಳಗೆ ಲಸಿಕೆಗಳನ್ನು ತಯಾರಿಸುವುದು ಅಭೂತಪೂರ್ವ ಸಾಧನೆ ಎಂದು ಹೇಳಿದರು.
ಈ ಸಂದರ್ಭದಲ್ಲಿ, ಮೋದಿ ಅವರು “ಆತ್ಮನಿರ್ಭರ ಭಾರತ” ಮತ್ತು ಬಲಿಷ್ಠ ಭಾರತಕ್ಕಾಗಿನ ತಮ್ಮ ಕರೆಯನ್ನು ಪುನರುಚ್ಚರಿಸಿದರು.
ಭಾರತವು ಈಗ ಸುಸ್ಥಿರ ಅಭಿವೃದ್ಧಿ ಮತ್ತು ಶುದ್ಧ ಶಕ್ತಿಯಲ್ಲಿ ಜಗತ್ತಿಗೆ ದಾರಿ ತೋರಿಸುತ್ತಿದೆ ಮತ್ತು ಸಾಫ್ಟ್ವೇರ್ ಮತ್ತು ಉಪಗ್ರಹ ಅಭಿವೃದ್ಧಿಯಲ್ಲಿ, ಇತರ ದೇಶಗಳ ಪ್ರಗತಿಯಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ ಎಂದು ಅವರು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.