ನವದೆಹಲಿ: ಇಂದು ಸಂಜೆ 5 ಗಂಟೆಗೆ ರಾಷ್ಟ್ರವನ್ನುದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ಅವರ ಮಾತು ಕೋವಿಡ್ ಮತ್ತು ಅದಕ್ಕೆ ಸಂಬಂಧಿಸಿದ ನಿರ್ಬಂಧಗಳಿಗೆ ಸಂಬಂಧಿಸಿದ್ದಾಗಿರಬಹುದು ಎಂದು ಊಹಿಸಲಾಗಿದೆ.
ಎರಡನೇ ಕೋವಿಡ್ -19 ಅಲೆ ಕಡಿಮೆಯಾದ ಪರಿಣಾಮ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಏಪ್ರಿಲ್ ಮಧ್ಯದಿಂದ ವಿಧಿಸಲಾಗಿದ್ದ ಲಾಕ್ಡೌನ್ ನಿರ್ಬಂಧಗಳನ್ನು ಹಂತಹಂತವಾಗಿ ಸರಾಗಗೊಳಿಸಲು ನಿರ್ಧರಿಸಿದೆ. ಗುಜರಾತ್ ಸರ್ಕಾರವು ರಾಜ್ಯದಲ್ಲಿ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಿಸಿದೆ ಮತ್ತು ಇಂದಿನಿಂದ 100% ಸಿಬ್ಬಂದಿಗಳೊಂದಿಗೆ ಕಚೇರಿಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟಿದೆ.
ದೆಹಲಿ, ಮಹಾರಾಷ್ಟ್ರ ಮತ್ತು ಉತ್ತರ ಪ್ರದೇಶದಂತಹ ಅನೇಕ ರಾಜ್ಯಗಳು ಈಗ ಲಾಕ್ಡೌನ್ ನಿರ್ಬಂಧಗಳನ್ನು ಸಡಿಲಿಸಲು ಪ್ರಾರಂಭಿಸಿವೆ, ಆದರೆ ತಮಿಳುನಾಡು, ಕರ್ನಾಟಕ ಮತ್ತು ಉತ್ತರಾಖಂಡ ಲಾಕ್ಡೌನ್ ನಿರ್ಬಂಧಗಳನ್ನು ಜಾರಿಯಲ್ಲಿಟ್ಟಿವೆ. ಶೀಘ್ರದಲ್ಲೇ ಇಲ್ಲೂ ಲಾಕ್ಡೌನ್ ತೆರವು ನಡೆಯುವ ನಿರೀಕ್ಷೆ ಇದೆ.
Prime Minister Shri @narendramodi will address the nation at 5 PM today, 7th June.
— PMO India (@PMOIndia) June 7, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.