ನವದೆಹಲಿ: ಸರ್ಕಾರವು ಕೈಗೊಂಡ ಹಲವಾರು ಕಾರ್ಯವಿಧಾನದ ಸುಧಾರಣೆಗಳು ದೇಶೀಯ ಮತ್ತು ಜಾಗತಿಕ ಬೇಡಿಕೆಯನ್ನು ಪೂರೈಸುವ ನಿಟ್ಟಿನಲ್ಲಿ ರಕ್ಷಣಾ ಉದ್ಯಮವನ್ನು ಪರಿವರ್ತಿಸಿವೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.
ಭಾರತ-ಸ್ವೀಡನ್ ರಕ್ಷಣಾ ಉದ್ಯಮದ ಸಹಕಾರದ ಕುರಿತು ವೆಬ್ನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಸಿಂಗ್, ಆತ್ಮನಿರ್ಭರ್ ಭಾರತ್ ಅಭಿಯಾನದ ಧ್ಯೇಯವಾಕ್ಯವು ಮೇಕ್ ಇನ್ ಇಂಡಿಯಾ ಮತ್ತು ಮೇಕ್ ಫಾರ್ ದಿ ವರ್ಲ್ಡ್ ಆಗಿದೆ. ಈ ಅಭಿಯಾನವು ರಕ್ಷಣಾ ವಲಯವನ್ನು ಭಾರತದ ಆರ್ಥಿಕ ಬೆಳವಣಿಗೆಯಲ್ಲಿ ಪ್ರಮುಖ ಪಾತ್ರ ವಹಿಸುವಂತೆ ಮಾಡಿದೆ ಮತ್ತು ಭಾರತಕ್ಕೆ ಮತ್ತು ಜಗತ್ತಿಗೆ ವೆಚ್ಚ ಪರಿಣಾಮಕಾರಿ ಗುಣಮಟ್ಟದ ಉತ್ಪನ್ನಗಳನ್ನು ತಯಾರಿಸುವತ್ತ ಗಮನ ಕೇಂದ್ರೀಕರಿಸಿದೆ ಎಂದು ಅವರು ಹೇಳಿದರು.
ರಕ್ಷಣಾ ಸ್ವಾಧೀನ ಪ್ರಕ್ರಿಯೆ (ಡಿಎಪಿ) 2020 ದೇಶೀಯ ಉತ್ಪಾದನೆಯನ್ನು ಪ್ರೋತ್ಸಾಹಿಸುತ್ತದೆ ಮತ್ತು ಭಾರತವು ರಕ್ಷಣಾ ಉತ್ಪಾದನಾ ಕೇಂದ್ರವಾಗಿ ಹೊರಹೊಮ್ಮಲು ಬಲವಾದ ಅಡಿಪಾಯವನ್ನು ಒದಗಿಸುತ್ತಿದೆ ಎಂದು ಅವರು ಹೇಳಿದರು.
ಎಫ್ಡಿಐ ಉದಾರೀಕರಣ ಮತ್ತು ವ್ಯವಹಾರಗಳನ್ನು ಸುಲಭಗೊಳಿಸುವಂತಹ ನೀತಿ ನಿರ್ಧಾರಗಳು ವಿಶ್ವದ ಉನ್ನತ ರಕ್ಷಣಾ ಕಂಪನಿಗಳನ್ನು ಆಕರ್ಷಿಸುತ್ತಿವೆ ಮತ್ತು ಅವುಗಳು ಭಾರತದಲ್ಲಿ ಜಂಟಿ ಉದ್ಯಮ ಸಂಸ್ಥೆಗಳನ್ನು ನಡೆಸುವಂತೆ ಮಾಡುತ್ತಿದೆ ಎಂದು ಅವರು ತಿಳಿಸಿದ್ದಾರೆ.
ಉತ್ತರ ಪ್ರದೇಶ ಮತ್ತು ತಮಿಳುನಾಡಿನ ರಕ್ಷಣಾ ಕಾರಿಡಾರ್ಗಳಲ್ಲಿ ಹೂಡಿಕೆ ಮಾಡಲು ಸ್ವೀಡಿಷ್ ಸಂಸ್ಥೆಗಳನ್ನು ಆಹ್ವಾನಿಸಿದ ಅವರು, ರಾಜ್ಯ ಸರ್ಕಾರಗಳು ನೀಡುತ್ತಿರುವ ವಿಶಿಷ್ಟ ಪ್ರೋತ್ಸಾಹ ಮತ್ತು ಭಾರತದಲ್ಲಿ ಹೆಚ್ಚು ನುರಿತ ಉದ್ಯೋಗಿಗಳ ಲಭ್ಯತೆಯಿಂದ ಲಾಭ ಪಡೆಯಬಹುದು ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.