ನವದೆಹಲಿ: ಕಾಂಗ್ರೆಸ್ ಪಕ್ಷಕ್ಕೆ ಭಾರಿ ಹಿನ್ನಡೆಯ ಬೆಳವಣಿಗೆ ನಡೆದಿದ್ದು, ಹಿರಿಯ ನಾಯಕ ಜಿತಿನ್ ಪ್ರಸಾದ್ ಬುಧವಾರ ಔಪಚಾರಿಕವಾಗಿ ಬಿಜೆಪಿಗೆ ಸೇರಿದ್ದಾರೆ.
ನವದೆಹಲಿಯ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಕೇಂದ್ರ ಸಚಿವ ಪಿಯೂಷ್ ಗೋಯಲ್ ಮತ್ತು ಇತರ ಉನ್ನತ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅವರನ್ನು ಔಪಚಾರಿಕವಾಗಿ ಪಕ್ಷಕ್ಕೆ ಸೇರಿಸಲಾಯಿತು.
ಜತಿನ್ ಪ್ರಸಾದ ಅವರು ಬಿಜೆಪಿಗೆ ಸೇರುವ ಬಗ್ಗೆ 2019 ರ ಲೋಕಸಭಾ ಚುನಾವಣೆಯಲ್ಲೂ ಉಹಾಪೋಹಗಳು ಹಬ್ಬಿದ್ದವು, ಆದರೆ ಕಾಂಗ್ರೆಸ್ ನಾಯಕತ್ವವು ಪಕ್ಷವನ್ನು ತೊರೆಯದಂತೆ ಅವರ ಮನವೊಲಿಸುವಲ್ಲಿ ಯಶಸ್ವಿಯಾಗಿದೆ ಎಂದು ನಂಬಲಾಗಿತ್ತು. ಆದರೀಗ ಅವರು ಬಿಜೆಪಿಗೆ ಅಧಿಕೃತವಾಗಿ ಸೇರಿ ಕಾಂಗ್ರೆಸ್ ಪಕ್ಷಕ್ಕೆ ದೊಡ್ಡ ಮಟ್ಟದ ಆಘಾತ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.