2021-22ನೇ ಮಾರುಕಟ್ಟೆ ಋತುವಿಗಾಗಿ ಸರ್ಕಾರ ಮುಂಗಾರು ಬೆಳೆಗಳ ಎಂ.ಎಸ್.ಪಿ. ಹೆಚ್ಚಿಸಿ, ರೈತರಿಗೆ ಅವರ ಉತ್ಪನ್ನಗಳಿಗೆ ಲಾಭದಾಯಕ ದರವನ್ನು ಖಾತ್ರಿಪಡಿಸಿದೆ. ಹಿಂದಿನ ವರ್ಷಕ್ಕಿಂತ ಎಂ.ಎಸ್.ಪಿ.ಯಲ್ಲಿ ಅಧಿಕ ಹೆಚ್ಚಳ ಎಳ್ಳಿಗೆ (ಕ್ವಿಂಟಲ್ ಗೆ 452 ರೂ.) ನಂತರ ತೊಗರಿ ಮತ್ತು ಉದ್ದು (ಪ್ರತಿ ಕ್ವಿಂಟಲ್ ಗೆ 300 ರೂ.) ಶಿಫಾರಸು ಮಾಡಲಾಗಿದೆ. ನೆಲಗಡಲೆ ಮತ್ತು ಹುಚ್ಚೆಳ್ಳಿಗೆ ಸಂಬಂಧಿಸಿದಂತೆ, ಕಳೆದ ವರ್ಷಕ್ಕೆ ಹೋಲಿಸಿದರೆ ಕ್ವಿಂಟಲ್ಗೆ ಅನುಕ್ರಮವಾಗಿ 275 ರೂ ಮತ್ತು 235 ರೂ. ಹೆಚ್ಚಳ ಮಾಡಲಾಗಿದೆ. ಬೆಳೆ ವೈವಿಧ್ಯವನ್ನು ಉತ್ತೇಜಿಸುವ ಗುರಿಯೊಂದಿಗೆ ಬೆಲೆಗಳಲ್ಲಿ ತಾರತಮ್ಯ ಮಾಡಲಾಗಿದೆ.
2021-22ರ ಮಾರುಕಟ್ಟೆ ಋತುವಿನಲ್ಲಿ ಮುಂಗಾರು ಬೆಳೆಗಳ ಎಂ.ಎಸ್.ಪಿ. ಹೆಚ್ಚಳವು, 2018-19ರ ಕೇಂದ್ರ ಬಜೆಟ್ ಪ್ರಕಟಣೆಗೆ ಅನುಗುಣವಾಗಿ ಅಖಿಲ ಭಾರತ ಮಟ್ಟದ ಸರಾಸರಿ ಉತ್ಪಾದನಾ ವೆಚ್ಚದ (ಸಿಓಪಿ) ಕನಿಷ್ಠ 1.5 ಪಟ್ಟು ಹೆಚ್ಚಾಗಿದ್ದು, ರೈತರಿಗೆ ಸಮಂಜಸವಾದ ನ್ಯಾಯಯುತ ಸಂಭಾವನೆ ನೀಡುವ ಗುರಿ ಹೊಂದಿದೆ. ರೈತರಿಗೆ ಉತ್ಪಾದನಾ ವೆಚ್ಚಕ್ಕಿಂತ ಹೆಚ್ಚಿನ ಆದಾಯವು ಬಜ್ರಾ (ಶೇ.85) ಮತ್ತು ನಂತರ ಉದ್ದು (ಶೇ.65) ಮತ್ತು ತೊಗರಿ (ಶೇ.62)ಗೆ ಸಂಬಂಧಿಸಿದಂತೆ ಹೆಚ್ಚು ಎಂದು ಅಂದಾಜಿಸಲಾಗಿದೆ. ಉಳಿದ ಬೆಳೆಗಳಿಗೆ, ರೈತರು ಮಾಡುವ ಉತ್ಪಾದನಾ ವೆಚ್ಚದ ಮೇಲೆ ಕನಿಷ್ಠ ಶೇ. 50ರಷ್ಟು ಆದಾಯ ಬರುತ್ತದೆ ಎಂದು ಅಂದಾಜಿಸಲಾಗಿದೆ.
ಸೂಕ್ತವಾದ ಬೇಡಿಕೆ – ಪೂರೈಕೆಯನ್ನು ಸಮತೋಲಿತವಾಗಿಡಲು ಈ ಕೆಳಕಂಡ ಬೆಳೆಗಳಿಗೆ ಸಂಬಂಧಿಸಿದಂತೆ ರೈತರು ದೊಡ್ಡ ಪ್ರದೇಶಕ್ಕೆ ಬದಲಾಗುವಂತೆ ಉತ್ತೇಜಿಸಲು ಎಣ್ಣೆ ಕಾಳುಗಳು, ಬೇಳೆಧಾನ್ಯಗಳು ಮತ್ತು ಒರಟು ಸಿರಿ ಧಾನ್ಯಗಳ ವಿಚಾರದಲ್ಲಿ ಎಂ.ಎಸ್.ಪಿಯನ್ನು ಮರು ಹೊಂದಿಕೆ ಮಾಡಲು ಕಳೆದ ಕೆಲವು ವರ್ಷಗಳಿಂದ ಸಂಘಟಿತ ಪ್ರಯತ್ನ ಮಾಡಲಾಗುತ್ತಿದೆ. ಅಂತರ್ಜಲ ಮಟ್ಟಕ್ಕೆ ದೀರ್ಘಾವಧಿಯ ಪ್ರತಿಕೂಲ ಪರಿಣಾಮವಾಗದಂತೆ ಭತ್ತ-ಗೋಧಿಯನ್ನು ಬೆಳೆಯಲು ಸಾಧ್ಯವಾಗದ ಪ್ರದೇಶಗಳಲ್ಲಿ ಪೌಷ್ಟಿಕವಾಗಿ ಶ್ರೀಮಂತವಾದ ಪೌಷ್ಟಿಕಯುಕ್ತ ಸಿರಿಧಾನ್ಯಗಳ ಉತ್ಪಾದನೆಯನ್ನು ಪ್ರೋತ್ಸಾಹಿಸಲು ಹೆಚ್ಚಿನ ಗಮನವನ್ನು ನೀಡಲಾಗುತ್ತಿದೆ.
ಜೊತೆಗೆ, ಸರ್ಕಾರವು 2018ರಲ್ಲಿ ಘೋಷಿಸಿದ ಅಂಬ್ರೆಲಾ ಯೋಜನೆಯಾದ “ಪ್ರಧಾನಮಂತ್ರಿ ಅನ್ನದಾತಾ ಆಯ್ ಸಂರಕ್ಷಣ್ ಅಭಿಯಾನ” (ಪಿಎಂ-ಎ.ಎ.ಎಸ್.ಎಚ್.ಎ) ರೈತರು ತಮ್ಮ ಉತ್ಪನ್ನಗಳಿಗೆ ಸೂಕ್ತ ಪ್ರತಿಫಲ ಪಡೆಯುವಲ್ಲಿ ಸಹಾಯ ಮಾಡುತ್ತದೆ. ಈ ಅಂಬ್ರೆಲಾ ಯೋಜನೆ ಮೂರು ಉಪ-ಯೋಜನೆಗಳನ್ನು ಒಳಗೊಂಡಿದೆ, ಅಂದರೆ ಬೆಲೆ ಬೆಂಬಲ ಯೋಜನೆ (ಪಿ.ಎಸ್.ಎಸ್.) , ಬೆಲೆ ಕೊರತೆ ಪಾವತಿ ಯೋಜನೆ (ಪಿಡಿಪಿಎಸ್) ಮತ್ತು ಖಾಸಗಿ ಖರೀದಿ ಮತ್ತು ದಾಸ್ತಾನು ಯೋಜನೆ (ಪಿಪಿಎಸ್.ಎಸ್) ಪ್ರಾಯೋಗಿಕ ಆಧಾರದ ಮೇಲೆ ರೂಪಿಸಲಾಗಿದೆ.
ದ್ವಿದಳ ಧಾನ್ಯಗಳ ಉತ್ಪಾದನೆಯಲ್ಲಿ ಸ್ವಾವಲಂಬನೆ ಸಾಧಿಸುವ ಗುರಿಯೊಂದಿಗೆ, ಪ್ರಸಕ್ತ ಮುಂಗಾರು 2021ರ ಋತುವಿನಲ್ಲಿಯೇ ಅನುಷ್ಠಾನಕ್ಕೆ ವಿಶೇಷ ಮುಂಗಾರು ಕಾರ್ಯತಂತ್ರವನ್ನು ಸಿದ್ಧಪಡಿಸಲಾಗಿದೆ. ತೊಗರಿ, ಹೆಸರು ಮತ್ತು ಉದ್ದಿಗಾಗಿ ಪ್ರದೇಶ ವಿಸ್ತರಣೆ ಮತ್ತು ಉತ್ಪಾದಕತೆ ವರ್ಧನೆ ಎರಡಕ್ಕೂ ವಿವರವಾದ ಯೋಜನೆಯನ್ನು ರೂಪಿಸಲಾಗಿದೆ. ಕಾರ್ಯತಂತ್ರದಡಿಯಲ್ಲಿ, ಲಭ್ಯವಿರುವ ಹೆಚ್ಚಿನ ಇಳುವರಿ ನೀಡುವ ಎಲ್ಲಾ ಪ್ರಭೇದಗಳ (ಎಚ್.ವೈ.ವಿ.ಗಳು) ಬೀಜಗಳನ್ನು ಉಚಿತವಾಗಿ ವಿತರಿಸಲಾಗುತ್ತಿದೆ. ಅದೇರೀತಿ, ಎಣ್ಣೆ ಕಾಳುಗಳಿಗಾಗಿ, 2021ರ ಮುಂಗಾರು ಹಂಗಾಮಿನಲ್ಲಿ ಮಿನಿ-ಕಿಟ್ ಗಳ ರೂಪದಲ್ಲಿ ರೈತರಿಗೆ ಹೆಚ್ಚಿನ ಇಳುವರಿ ನೀಡುವ ಬೀಜಗಳನ್ನು ಉಚಿತವಾಗಿ ವಿತರಿಸುವ ಮಹತ್ವಾಕಾಂಕ್ಷೆಯ ಯೋಜನೆಗೆ ಭಾರತ ಸರ್ಕಾರ ಅನುಮೋದನೆ ನೀಡಿದೆ. ವಿಶೇಷ ಮುಂಗಾರು ಕಾರ್ಯಕ್ರಮವು ಹೆಚ್ಚುವರಿ 6.37 ಲಕ್ಷ ಹೆಕ್ಟೇರ್ ಪ್ರದೇಶವನ್ನು ಎಣ್ಣೆಕಾಳುಗಳ ಅಡಿಯಲ್ಲಿ ತರಲಿದೆ ಮತ್ತು 120.26 ಲಕ್ಷ ಕ್ವಿಂಟಾಲ್ ಎಣ್ಣೆಕಾಳುಗಳು ಮತ್ತು ಖಾದ್ಯ ತೈಲವನ್ನು 24.36 ಲಕ್ಷ ಕ್ವಿಂಟಾಲ್ ಉತ್ಪಾದಿಸುವ ನಿರೀಕ್ಷೆಯಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.