ನವದೆಹಲಿ: ವಯಸ್ಸಾದ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ಹೇಳಲಾದ ವೈರಲ್ ವಿಡಿಯೋ ಕುರಿತು ವಿಚಾರಣೆ ನಡೆಸುವ ಸಲುವಾಗಿ ಉತ್ತರ ಪ್ರದೇಶ ಪೊಲೀಸರು ಟ್ವಿಟ್ಟರ್ ಇಂಡಿಯಾದ ವ್ಯವಸ್ಥಾಪಕ ನಿರ್ದೇಶಕ ಮನೀಶ್ ಮಹೇಶ್ವರಿ ಅವರಿಗೆ ನೋಟಿಸ್ ಕಳುಹಿಸಿದ್ದು, ಘಾಜಿಯಾಬಾದ್ನ ಪೊಲೀಸ್ ಠಾಣೆಯ ಮುಂದೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ ಎಂದು ಮೂಲಗಳು ವರದಿ ಮಾಡಿವೆ.
ಗುರುವಾರ ನೋಟಿಸ್ ನೀಡಲಾಗಿದ್ದು, ಮಹೇಶ್ವರಿ ಅವರಿಗೆ ಏಳು ದಿನಗಳಲ್ಲಿ ಪೊಲೀಸ್ ಠಾಣೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.
ಘಾಜಿಯಾಬಾದ್ ಪೊಲೀಸರ ಪ್ರಕಾರ, ವ್ಯಕ್ತಿಯ ಮೇಲಿನ ಹಲ್ಲೆಯಲ್ಲಿ ಕೋಮು ಆಯಾಮ ಇಲ್ಲ ಎಂದು ಸ್ಪಷ್ಟೀಕರಣಗಳನ್ನು ನೀಡಿದ ನಂತರವೂ ಟ್ವಿಟರ್ ವಿಡಿಯೋಗೆ ಸಂಬಂಧಿಸಿದ ಕೋಮು ಬಣ್ಣ ನೀಡುವ ಸುಳ್ಳು ಒಕ್ಕಣೆಯ ಪೋಸ್ಟ್ಗಳನ್ನು ಫ್ಲ್ಯಾಗ್ ಮಾಡಲು ಅಥವಾ ಅಳಿಸಲು ವಿಫಲವಾಗಿದೆ. ಟ್ವಿಟರ್ನ ಇಂತಹ ಧೋರಣೆಯಿಂದ ಕೋಮು ಸಂಘರ್ಷ ಸಂಭವಿಸುವ ಸಾಧ್ಯತೆ ಇದೆ ಎಂದು ಪೊಲೀಸರು ಹೇಳಿದ್ದಾರೆ.
ಹೊಸ ಮಾಹಿತಿ ತಂತ್ರಜ್ಞಾನ (ಐಟಿ) ನಿಯಮಗಳನ್ನು ಪಾಲಿಸದ ಕಾರಣ ಮಧ್ಯವರ್ತಿ ಸ್ಥಾನಮಾನವನ್ನು ಕಳೆದುಕೊಂಡಿರುವ ಕಾರಣ ಭಾರತದಲ್ಲಿ ಟ್ವಿಟರ್ ವಿರುದ್ಧ ಪೊಲೀಸ್ ದೂರು ದಾಖಲಾದ ಮೊದಲ ಪ್ರಕರಣ ಇದಾಗಿದೆ. ಐಟಿ ಕಾಯ್ದೆ ಹಾಗೂ ಭಾರತೀಯ ದಂಡ ಸಂಹಿತೆ (ಐಪಿಸಿ) ಅಡಿ ಟ್ವಿಟರ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.
ಕೇಂದ್ರ ಎಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ್ ಪ್ರಸಾದ್ ಅವರು ಇತ್ತೀಚೆಗೆ ಯುಪಿಯಲ್ಲಿ ಈ ಪ್ರಕರಣದ ಬಗ್ಗೆ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಟ್ವಿಟರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಘಾಜಿಯಾಬಾದ್ನಲ್ಲಿ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ಪ್ರಕರಣದ ವಿಡಿಯೋ ವೈರಲ್ ಆಗಿತ್ತು. ಹಲ್ಲೆ ನಡೆಸಿ ಆತನಿಂದ ಜೈಶ್ರೀರಾಮ್ ಹೇಳಿಸಲಾಗಿದೆ ಎಂದು ಟ್ವಿಟರ್ನಲ್ಲಿ ಕೆಲವರು ಹೇಳಿಕೊಂಡಿದ್ದರು. ಹಿಂದೂಗಳು ಹಲ್ಲೆ ನಡೆಸಿದ್ದಾರೆ ಎಂದು ಬಿಂಬಿಸಲಾಗಿತ್ತು. ಆದರೆ ಆತನ ಮೇಲೆ ಹಲ್ಲೆ ನಡೆಸಿದವರಲ್ಲಿ ಬಹುತೇಕರು ಮುಸ್ಲಿಮರೇ ಆಗಿದ್ದರು ಎಂದು ಪೊಲೀಸ್ ವಿಚಾರಣೆಯಿಂದ ತಿಳಿದು ಬಂದಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.