ನವದೆಹಲಿ: 2024 ಕ್ಕಿಂತ ಮೊದಲು ರಸ್ತೆ ಅಪಘಾತಗಳ ಸಂಖ್ಯೆಯನ್ನು ಶೇಕಡಾ 50 ರಷ್ಟು ಕಡಿಮೆ ಮಾಡುವುದು ನಮ್ಮ ಗುರಿಯಾಗಿದೆ ಮತ್ತು ರಾಷ್ಟ್ರದಾದ್ಯಂತ ರಸ್ತೆಗಳ ಗುಣಮಟ್ಟವನ್ನು ಹೆಚ್ಚಿಸಲು ಪ್ರಯತ್ನಗಳು ನಡೆಯುತ್ತಿವೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಹೇಳಿದ್ದಾರೆ.
ರಸ್ತೆ ಸುರಕ್ಷತಾ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ವಿಮಾ ಕಂಪನಿಗಳ ಸಹಕಾರ ನಗಣ್ಯ ಎಂದು ಸಚಿವ ಗಡ್ಕರಿ ವಿಷಾದ ವ್ಯಕ್ತಪಡಿಸಿದ್ದಾರೆ.
ಕೈಗಾರಿಕಾ ಅಂಗ Ficci ಆಯೋಜಿಸಿದ ವರ್ಚುವಲ್ ಕಾರ್ಯಕ್ರಮವೊಂದನ್ನು ಉದ್ದೇಶಿಸಿ ಅವರು ಈ ಹೇಳಿಕೆ ನೀಡಿದ್ದಾರೆ.
“ರಸ್ತೆ ಅಪಘಾತಗಳಿಂದ ಪ್ರತಿ ವರ್ಷ ಸುಮಾರು 1.5 ಲಕ್ಷ ಜನರು ಸಾಯುತ್ತಾರೆ. 2024 ಕ್ಕಿಂತ ಮೊದಲು ನಾವು ಸಾವು ಮತ್ತು ಅಪಘಾತಗಳನ್ನು ಶೇಕಡಾ 50 ರಷ್ಟು ಕಡಿಮೆ ಮಾಡುವುದು ನಮ್ಮ ಗುರಿ” ಎಂದು ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವರು ತಿಳಿಸಿದ್ದಾರೆ.
22 ಲಕ್ಷ ಚಾಲಕರ ಕೊರತೆ ಇದೆ. ಆದ್ದರಿಂದ, ವಿಶೇಷವಾಗಿ ಹಿಂದುಳಿದ ಜಿಲ್ಲೆಗಳಲ್ಲಿ 2,000 ಚಾಲನಾ ಶಾಲೆಗಳನ್ನು ಸ್ಥಾಪಿಸುವ ಉದ್ದೇಶವನ್ನು ಸರ್ಕಾರ ಹೊಂದಿದೆ ಎಂದಿರುವ ಗಡ್ಕರಿ, ರಸ್ತೆಗಳ ಗುಣಮಟ್ಟವನ್ನು ಸುಧಾರಿಸಲು ತಮ್ಮ ಸಚಿವಾಲಯವೂ ಸಹ ಕಾರ್ಯನಿರ್ವಹಿಸುತ್ತಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.