News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಪಾಕ್‌ಗೆ ಭಾರತ ಸರ್‌ಪ್ರೈಸ್ ನೀಡಲಿದೆ

Indo-Pakನವದೆಹಲಿ: ಪಾಕಿಸ್ಥಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ಸರ್ತಾಜ್ ಅಜೀಜ್ ಅವರು ದೆಹಲಿಯಲ್ಲಿ ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕರನ್ನು ಭೇಟಿ ಮಾಡುತ್ತಿದ್ದರೂ ಭಾರತವು ಅದರೊಂದಿಗೆ ಭಾನುವಾರ ಮಾತುಕತೆ ನಡೆಸಲಿದೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಕಾಶ್ಮೀರದ ಪ್ರತ್ಯೇಕತಾವಾದಿಗಳನ್ನು ಭೇಟಿಯಾಗುವ ನಿಲುವು ಭಾರತವನ್ನು ಕೆರಳಿಸುವ ಉದ್ದೇಶವಾಗಿದೆ. ಆದರೆ ಭಾರತವು ಈ ಮಾತುಕತೆಯನ್ನು ರದ್ದುಗೊಳಿಸುವ ಯಾವುದೇ ಪ್ರಮೇಯ ಹೊಂದಿಲ್ಲ ಎಂದು ಮೂಲಗಳು ವಿವರಿಸಿವೆ.

ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವೆಲ್ ಅವರು ಪಾಕಿಸ್ಥಾನ ರಾಷ್ಟ್ರೀಯ ಭದ್ರತಾ ಸಲಹೇಗಾರ ಸರ್ತಾಜ್ ಅಜೀಜ್ ಅವರ ಜೊತೆ ಭಯೋತ್ಪಾದನೆ ತಡೆಯುವಲ್ಲಿ ಗಮನ ಹರಿಸುವ ಕುರಿತು ಮಾತುಕತೆ ನಡೆಸಲಿದ್ದಾರೆ. ಗಡಿಯಲ್ಲಿ ಅತಿಯಾದ ನೀತಿ ಉಲ್ಲಂಘನೆ ನಡೆಯುತ್ತಿದೆ. ಕಾಶ್ಮೀರಿ ನಾಗರಿಕರ ಮೇಲಿನ ದಾಳಿ, ಪಂಜಾಬ್ ಹಾಗೂ ಉಧಂಪುರ ಬಾಂಬ್ ದಾಳಿಯಿಂದ ಅಮಾಯಕರು ಪ್ರಾಣ ಕಳೆದುಕೊಂಡಿದ್ದಾರೆ.

ಪಾಕ್ ಭಯೋತ್ಪಾದನೆಯನ್ನು ಗಂಭೀರವಾಗಿ ಪರಿಗಣಿಸುತ್ತಿಲ್ಲ. ಭಯೋತ್ಪಾದನೆ ಕುರಿತು ಹೆಚ್ಚಿನ ಒತ್ತು ನೀಡಲು ಭಾರತ ಮುಂದಾಗಿದ್ದು, ಬಲೂಚಿಸ್ಥಾನದಲ್ಲಿ ಬಂಡಾಯ ಹೂಡುವ ಬಗ್ಗೆ ಭಾರತ ಪ್ರಮುಖ ಪಾತ್ರ ನಿರ್ವಹಿಸಲಿದೆ ಎಂದು ತಿಳಿದು ಬಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top