ನವದೆಹಲಿ: ಲಸಿಕೆಯನ್ನು ಪಡೆದ ಬಳಿಕ ವ್ಯಕ್ತಿಯು ಆಸ್ಪತ್ರೆಗೆ ದಾಖಲಾಗುವ ಸಾಧ್ಯತೆಗಳು ಶೇಕಡಾ 75 ರಿಂದ 80 ರಷ್ಟು ಕಡಿಮೆಯಾಗುತ್ತದೆ ಎಂಬುದು ಆರೋಗ್ಯ ಕಾರ್ಯಕರ್ತರ ಮೇಲೆ ನಡೆಸಲಾದ ಅಧ್ಯಯನದಿಂದ ತಿಳಿದು ಬಂದಿದೆ ಎಂದು ನೀತಿ ಆಯೋಗ್ಯದ ಸದಸ್ಯ ಡಾ. ವಿ ಕೆ ಪಾಲ್ ಅವರು ಹೇಳಿದ್ದಾರೆ.
ಲಸಿಕೆ ಗಂಭೀರ ಸೋಂಕಿನಿಂದ ರಕ್ಷಣೆ ನೀಡುತ್ತದೆ ಎಂದು ಅಧ್ಯಯನವು ಸ್ಪಷ್ಟವಾಗಿ ತೋರಿಸುತ್ತದೆ. ಹೀಗಾಗಿ ಮೂರನೇ ಅಲೆಯಿಂದ ರಕ್ಷಣೆ ಪಡೆಯಲು ಲಸಿಕೆಯೊಂದೇ ಮಾರ್ಗ ಎಂದು ಅವರು ಹೇಳಿದ್ದಾರೆ.
ಇನ್ನೊಂದೆಡೆ ಕೋವಿಡ್ -19 ರ ದೈನಂದಿನ ಸಕ್ರಿಯ ಪ್ರಕರಣಗಳಲ್ಲಿ ಭಾರತವು ಕುಸಿತವನ್ನು ದಾಖಲಿಸುತ್ತಿದೆ ಮತ್ತು ಸೋಂಕಿನಿಂದ ಚೇತರಿಸಿಕೊಳ್ಳುವವರ ಸಂಖ್ಯೆಯಲ್ಲಿ ಮತ್ತಷ್ಟು ಸುಧಾರಣೆಯಾಗಿದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ಹೇಳಿದೆ.
ನವದೆಹಲಿಯಲ್ಲಿ ನಿನ್ನೆ ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಆರೋಗ್ಯ ಸಚಿವಾಲಯದ ಜಂಟಿ ಕಾರ್ಯದರ್ಶಿ ಲವ್ ಅಗರ್ವಾಲ್, ಮೇ 7 ರಂದು ಭಾರತವು ಸುಮಾರು 4. 14 ಲಕ್ಷ ಪ್ರಕರಣಗಳೊಂದಿಗೆ ಗರಿಷ್ಠ ಮಟ್ಟವನ್ನು ವರದಿ ಮಾಡಿದ ನಂತರದಲ್ಲಿ ದೈನಂದಿನ ಪ್ರಕರಣಗಳಲ್ಲಿ ನಿರಂತರ ಕುಸಿತ ಕಂಡುಬರುತ್ತಿದೆ. ದೈನಂದಿನ ಹೊಸ ಪ್ರಕರಣಗಳಲ್ಲಿ ಅತಿ ಹೆಚ್ಚು ವರದಿಯಾದ ನಂತರ ಈಗ ಅಂತಹ ಪ್ರಕರಣಗಳಲ್ಲಿ ಸುಮಾರು 85 ಪ್ರತಿಶತದಷ್ಟು ಕುಸಿತ ಕಂಡುಬಂದಿದೆ ಎಂದು ಅವರು ಹೇಳಿದರು.
ದೇಶವು ಚೇತರಿಕೆಯ ದರದಲ್ಲಿ ಸ್ಥಿರವಾದ ಏರಿಕೆಗೆ ಸಾಕ್ಷಿಯಾಗಿದೆ ಎಂದು ಹೇಳಿದರು. ಮೇ 3 ರಂದು ಒಟ್ಟಾರೆ ಚೇತರಿಕೆ ಪ್ರಮಾಣವು ಶೇಕಡಾ 81.8 ರಷ್ಟಿತ್ತು ಮತ್ತು ಈಗ ಅದು ಶೇಕಡಾ 96 ರ ಗಡಿ ತಲುಪಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.