ನವದೆಹಲಿ: ಪರಿಸರ ಕ್ಷೇತ್ರದಲ್ಲಿ ಎರಡು ದೇಶಗಳ ನಡುವಣ ಸಹಕಾರವನ್ನು ವೃದ್ಧಿಸುವ ಒಪ್ಪಂದಕ್ಕೆ ಭಾರತ ಮತ್ತು ಭೂತಾನ್ ಸಹಿ ಹಾಕಿವೆ.
ಈ ಒಪ್ಪಂದಕ್ಕೆ ವರ್ಚುವಲ್ ಆಗಿ ಭಾರತದ ಕಡೆಯಿಂದ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವ ಪ್ರಕಾಶ್ ಜಾವಡೇಕರ್ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವರು ಮತ್ತು ಭೂತಾನ್ ಕಡೆಯಿಂದ ರಾಷ್ಟ್ರೀಯ ಪರಿಸರ ಆಯೋಗದ ಅಧ್ಯಕ್ಷ ಡಾ. ತಾಂಡಿ ಡೋರ್ಜಿ ಸಹಿ ಹಾಕಿದರು.
ಈ ಸಂದರ್ಭದಲ್ಲಿ ಮಾತನಾಡಿದ ಜಾವಡೇಕರ್, “ಹವಾಮಾನ ಬದಲಾವಣೆ ಮತ್ತು ತ್ಯಾಜ್ಯ ನಿರ್ವಹಣೆ ಕ್ಷೇತ್ರದಲ್ಲಿ ಒಪ್ಪಂದವು ದ್ವಿಪಕ್ಷೀಯ ಸಹಕಾರದ ಹೊಸ ದೃಷ್ಟಿಕೋನಗಳನ್ನು ತೆರೆಯಲಿದೆ. ಉಭಯ ದೇಶಗಳ ನಡುವಿನ ಸಂಬಂಧವನ್ನು ಸಾಂಕೇತಿಕವಾಗಿದ್ದು, ಹವಾಮಾನ ಬದಲಾವಣೆ ಸೇರಿದಂತೆ ಪರಿಸರ ಸಂಬಂಧಿತ ವಿಷಯಗಳ ಬಗ್ಗೆ ಭೂತಾನ್ ಜೊತೆ ತೊಡಗಿಸಿಕೊಳ್ಳಲು ಭಾರತ ಬಯಸಿದೆ” ಎಂದರು.
ಭಾರತ ಮತ್ತು ಭೂತಾನ್ ಪಾಲುದಾರಿಕೆ ಮತ್ತು ಬೆಂಬಲವನ್ನು ಮತ್ತಷ್ಟು ಹೆಚ್ಚಿಸಲು, ವಾಯುಮಾಲಿನ್ಯ ತಡೆಗಟ್ಟುವಿಕೆ, ತ್ಯಾಜ್ಯ ನಿರ್ವಹಣೆ, ರಾಸಾಯನಿಕ ನಿರ್ವಹಣೆ ಮತ್ತು ಹವಾಮಾನ ಬದಲಾವಣೆಯಂತಹ ಕ್ಷೇತ್ರಗಳಲ್ಲಿ ಉತ್ತಮ ಅಭ್ಯಾಸಗಳನ್ನು ವಿನಿಮಯ ಮಾಡಿಕೊಳ್ಳಲು ಈ ಒಪ್ಪಂದವು ಒಂದು ವೇದಿಕೆಯಾಗಿದೆ. ಪರಸ್ಪರ ಆಸಕ್ತಿಯ ಕ್ಷೇತ್ರಗಳಲ್ಲಿ ಜಂಟಿ ಯೋಜನೆಗಳನ್ನು ಹೊಂದುವ ಸಾಧ್ಯತೆಯನ್ನೂ ಇದು ಒದಗಿಸುತ್ತದೆ ಎನ್ನಲಾಗಿದೆ.
ಒಪ್ಪಂದವು ತಾಂತ್ರಿಕ, ವೈಜ್ಞಾನಿಕ ಮತ್ತು ನಿರ್ವಹಣಾ ಸಾಮರ್ಥ್ಯಗಳನ್ನು ಬಲಪಡಿಸುತ್ತದೆ ಮತ್ತು ಉಭಯ ದೇಶಗಳ ನಡುವೆ ಪರಸ್ಪರ ಲಾಭದಾಯಕ ಪಾಲುದಾರಿಕೆಯನ್ನು ಉತ್ತೇಜಿಸಲು ಪರಿಸರ ಕ್ಷೇತ್ರದಲ್ಲಿ ಸಹಕಾರಗಳನ್ನು ವಿಸ್ತರಿಸುತ್ತದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.