ನವದೆಹಲಿ: ಭಾರತವು ಮೂರನೇ ಕೋವಿಡ್ ಅಲೆಯನ್ನು ಎದುರಿಸುವುದು ಅನಿವಾರ್ಯವಾಗಿದ್ದು, ಮುಂದಿನ ಆರರಿಂದ ಎಂಟು ವಾರಗಳಲ್ಲಿ ದೇಶವು ಮೂರನೇ ಅಲೆಯನ್ನು ಎದುರಿಸಬೇಕಾಗಬಹುದು ಎಂದು ಏಮ್ಸ್ ಮುಖ್ಯಸ್ಥ ಡಾ.ರಂದೀಪ್ ಗುಲೇರಿಯಾ ಅವರು ಹೇಳಿದ್ದಾರೆ.
ವಾರಗಟ್ಟಲೆಯ ಕಟ್ಟುನಿಟ್ಟಿನ ನಿರ್ಬಂಧಗಳ ನಂತರ ದೇಶದ ಕೆಲವು ಭಾಗಗಳಲ್ಲಿ ಅನ್ಲಾಕ್ ಘೋಷಣೆ ಮಾಡಲಾಗಿದೆ, ಈಗ ದೇಶದ ಮುಂದೆ ಇರುವ ಪ್ರಮುಖ ಸವಾಲು ಎಂದರೆ ದೊಡ್ಡ ಜನಸಂಖ್ಯೆಗೆ ಲಸಿಕೆ ನೀಡುವುದು ಎಂದು ಗುಲೇರಿಯಾ ಹೇಳಿದ್ದಾರೆ.
ಕೋವಿಶೀಲ್ಡ್ನ ಎರಡು ಡೋಸ್ ಅಂತರಗಳನ್ನು ಹೆಚ್ಚಿಸುವುದು ಕೆಟ್ಟ ನಿರ್ಧಾರವಲ್ಲ, ಇದರಿಂದ ಹೆಚ್ಚಿನ ಜನರಿಗೆ ಲಸಿಕೆ ನೀಡುವುದು ಸಾಧ್ಯವಾಗುತ್ತದೆ” ಎಂದು ಅವರು ಹೇಳಿದ್ದಾರೆ.
ವೈರಸ್ ರೂಪಾಂತರವನ್ನು ಇನ್ನಷ್ಟು ಅಧ್ಯಯನ ಮಾಡಲು ಕೋವಿಡ್ ವಿರುದ್ಧದ ಭಾರತದ ಹೋರಾಟದಲ್ಲಿ ಹೊಸ ಆಯಾಮವನ್ನು ಅಭಿವೃದ್ಧಿಪಡಿಸಬೇಕಾಗಿದೆ ಎಂದು ಅವರು ಅಭಿಪ್ರಾಯಿಸಿದ್ದಾರೆ.
“ದೇಶ ಅನ್ಲಾಕ್ ಆದಂತೆ ಕೋವಿಡ್ ಸೂಕ್ತ ನಡವಳಿಕೆ ದೂರವಾಗುತ್ತದೆ. ಎರಡನೇ ಅಲೆಯಿಂದ ಜನರು ಪಾಠ ಕಲಿತಂತೆಯೂ ಕಾಣುವುದಿಲ್ಲ. ದೊಡ್ಡ ಮಟ್ಟದಲ್ಲಿ ಒಟ್ಟು ಸೇರುತ್ತಿದ್ದಾರೆ. ಹೀಗಾಗಿ ಮೂರನೇ ಅಲೆ ಅನಿವಾರ್ಯ, ಎಂಟು ತಿಂಗಳೊಳಗೆ ಇದು ಸಂಭವಿಸಬಹುದು” ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.