ಲಕ್ನೋ: 1000 ಕ್ಕೂ ಹೆಚ್ಚು ಜನರಿಗೆ ತಮ್ಮ ಧರ್ಮವನ್ನು ಬದಲಾಯಿಸುವಂತೆ ಬಲವಂತಪಡಿಸಿದ ಆರೋಪದ ಮೇರೆಗೆ ಉತ್ತರ ಪ್ರದೇಶದ ಎಟಿಎಸ್ ದೆಹಲಿಯ ಇಬ್ಬರನ್ನು ಬಂಧಿಸಿದೆ.
ಉಮರ್ ಗೌತಮ್ ಮತ್ತು ಜಹಾಂಗೀರ್ ಎಂಬ ಇಬ್ಬರು ಆರೋಪಿಗಳು ಸುಮಾರು 1000 ಮುಸ್ಲಿಮೇತರರನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಬಲವಂತಪಡಿಸುತ್ತಿದ್ದರು, ಆಮಿಷವೊಡ್ಡುತ್ತಿದ್ದರು ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.
ಓರ್ವ ಆರೋಪಿ ತಾನು ಜಾಮಿಯಾ ನಗರದ ಬಟಾಲಾ ಮನೆಯ ನಿವಾಸಿಯಾಗಿದ್ದು, ಸ್ವತಃ ಮತಾಂತರ ಆಗಿದ್ದಾಗಿ ಬಹಿರಂಗಪಡಿಸಿದ್ದಾನೆ.
ಯುಪಿ ಎಡಿಜಿ (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಮತಾಂತರದ ದಂಧೆ ನಡೆಯುತ್ತಿದೆ, ಜನರನ್ನು ಇಸ್ಲಾಂಗೆ ಮತಾಂತರಗೊಳ್ಳುವಂತೆ ಒತ್ತಾಯಿಸಲಾಗುತ್ತಿದೆ ಎಂದಿದ್ದಾರೆ.
ಸುಮಾರು 1000 ಜನರು ಈವರೆಗೆ ಮತಾಂತರವಾಗಿದ್ದಾರೆ ಎಂದು ಕುಮಾರ್ ದೃಢಪಡಿಸಿದ್ದಾರೆ.
ಈ ಇಬ್ಬರು ಬಡ ಕುಟುಂಬಗಳು, ನಿರುದ್ಯೋಗಿ ಯುವಕರು ಮತ್ತು ಅಂಗವಿಕಲರನ್ನು, ವಿಶೇಷವಾಗಿ ಶ್ರವಣ ಮತ್ತು ಮಾತು ಬಾರದ ಮಕ್ಕಳನ್ನು ಗುರಿಯಾಗಿಸಿಕೊಂಡು ಅವರ ಧರ್ಮವನ್ನು ಬದಲಾಯಿಸುವಂತೆ ಒತ್ತಾಯಿಸುತ್ತಿದ್ದರು ಎನ್ನಲಾಗಿದೆ.
ಪೊಲೀಸರ ಪ್ರಕಾರ, ಹಣ ಮತ್ತು ಆರ್ಥಿಕ ಸ್ಥಿರತೆಗಾಗಿ ಜನರು ತಮ್ಮ ಧರ್ಮವನ್ನು ಪರಿವರ್ತಿಸುವ ಆಮಿಷಕ್ಕೆ ಒಳಗಾಗುತ್ತಿದ್ದಾರೆ.
ಧಾರ್ಮಿಕ ಮತಾಂತರಕ್ಕಾಗಿ ಐಎಸ್ಐನಿಂದ ಧನಸಹಾಯವನ್ನು ಇವರು ಪಡೆಯುತ್ತಿರುವ ಬಗ್ಗೆ ಅನುಮಾನವಿದೆ ಎನ್ನಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.