ನವದೆಹಲಿ: ಕಿವಿ ಕೇಳದ ಮತ್ತು ಮಾತು ಬಾರದ ಮತ್ತು ದೈಹಿಕ ವಿಕಲಚೇತನ ಮಕ್ಕಳು ಮತ್ತು ಯುವಕರ ಮತಾಂತರದಲ್ಲಿ ಭಾಗಿಯಾಗಿರುವ ಆರೋಪಿಗಳ ವಿರುದ್ಧ ಗ್ಯಾಂಗ್ಸ್ಟರ್ ಕಾಯ್ದೆ ಮತ್ತು ರಾಷ್ಟ್ರೀಯ ಭದ್ರತಾ ಕಾಯ್ದೆ (ಎನ್ಎಸ್ಎ) ಅಡಿಯಲ್ಲಿ ಕ್ರಮಕೈಗೊಳ್ಳಲು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಆದೇಶಿಸಿದ್ದಾರೆ.
1,000 ಜನರನ್ನು ಬಲವಂತವಾಗಿ ಇಸ್ಲಾಂಗೆ ಮತಾಂತರಗೊಳಿಸಿದ್ದಕ್ಕಾಗಿ ದೆಹಲಿಯಲ್ಲಿ ಸೋಮವಾರ ಇಬ್ಬರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮುಖ್ಯಮಂತ್ರಿಗಳು ಕಠಿಣ ಕ್ರಮಕ್ಕೆ ಆದೇಶಿಸಿದ್ದಾರೆ ಮತ್ತು ದಂಧೆಯ ಬಗ್ಗೆ ಹೆಚ್ಚಿನ ತನಿಖೆ ನಡೆಸುವಂತೆ ಮತ್ತು ಭಾಗಿಯಾಗಿರುವ ಎಲ್ಲರನ್ನೂ ಬಂಧಿಸಿ ವಿಚಾರಣೆ ನಡೆಸುವಂತೆ ತನಿಖಾ ಏಜೆನ್ಸಿಗಳಿಗೆ ಅವರು ಸೂಚಿಸಿದ್ದಾರೆ.
ಆರೋಪಿಗಳ ಆಸ್ತಿಯನ್ನು ವಶಪಡಿಸಿಕೊಳ್ಳುವಂತೆಯೂ ರಾಜ್ಯ ಸರ್ಕಾರ ಅಧಿಕಾರಿಗಳಿಗೆ ಆದೇಶಿಸಿದೆ.
ದೆಹಲಿಯ ಜಾಮಿಯಾ ನಗರದಲ್ಲಿನ ಇಬ್ಬರು ಪಾಕಿಸ್ಥಾನದ ಇಂಟರ್ ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್ಐ)ನಿಂದ ಧನಸಹಾಯ ಪಡೆದುಕೊಂಡು ಕಿವಿ ಕೇಳಿಸದ ವಿದ್ಯಾರ್ಥಿಗಳು ಮತ್ತು ಇತರ ಬಡವರನ್ನು ಉತ್ತರಪ್ರದೇಶದಲ್ಲಿ ಇಸ್ಲಾಂಗೆ ಪರಿವರ್ತಿಸುವ ಸಂಘಟನೆಯನ್ನು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗಿದೆ.
ಲಕ್ನೋದ ಎಟಿಎಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಿಸಿದ ಬೆನ್ನಲ್ಲೇ ಉತ್ತರ ಪ್ರದೇಶ ಭಯೋತ್ಪಾದನಾ ನಿಗ್ರಹ ದಳ ಬಂಧಿಸಿದೆ.
ಬಂಧಿತ ಆರೋಪಿಗಳನ್ನು ನವದೆಹಲಿಯ ಜಾಮಿಯಾ ನಗರ ನಿವಾಸಿಗಳಾದ ಮುಫ್ತಿ ಖಾಜಿ ಜಹಾಂಗೀರ್ ಆಲಂ ಕಸ್ಮಿ ಮತ್ತು ಮೊಹಮ್ಮದ್ ಉಮರ್ ಗೌತಮ್ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು (ಕಾನೂನು ಮತ್ತು ಸುವ್ಯವಸ್ಥೆ) ಪ್ರಶಾಂತ್ ಕುಮಾರ್ ಗುರುತಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.