ನವದೆಹಲಿ: ದೇಶದ ಅಖಂಡತೆಗೆ, ಸಾರ್ವಭೌಮತ್ವದ ರಕ್ಷಣೆಗಾಗಿ ಶ್ರಮಿಸಿದ ಭಾರತೀಯ ಜನಸಂಘದ ನಾಯಕ, ಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವನ್ನು ಇಂದು ಆಚರಣೆ ಮಾಡಲಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿಯವರು ಈ ಸಂದರ್ಭದಲ್ಲಿ ಧೀಮಂತ ನಾಯಕನನ್ನು ಸ್ಮರಿಸಿ ಅವರ ತ್ಯಾಗವನ್ನು ಕೊಂಡಾಡಿದ್ದಾರೆ.
ಟ್ವಿಟ್ ಮಾಡಿರುವ ಮೋದಿ, “ಡಾ.ಶ್ಯಾಮಪ್ರಸಾದ್ ಮುಖರ್ಜಿ ಅವರ ಪುಣ್ಯ ತಿಥಿಯಂದು ಅವರ ಸ್ಮರಣೆಗಳು. ಅವರ ಉದಾತ್ತ ಆದರ್ಶಗಳು, ಶ್ರೀಮಂತ ಚಿಂತನೆಗಳು ಮತ್ತು ಜನರಿಗೆ ಸೇವೆ ಸಲ್ಲಿಸುವ ಬದ್ಧತೆ ನಮಗೆ ಸ್ಫೂರ್ತಿ ನೀಡುತ್ತದೆ. ರಾಷ್ಟ್ರೀಯ ಏಕೀಕರಣದತ್ತ ಅವರು ಮಾಡಿದ ಪ್ರಯತ್ನಗಳನ್ನು ಎಂದಿಗೂ ಮರೆಯಲಾಗುವುದಿಲ್ಲ” ಎಂದಿದ್ದಾರೆ.
ಶ್ಯಾಮಪ್ರಸಾದ್ ಮುಖರ್ಜಿ 1901 ರ ಜುಲೈ 6 ರಂದು ಕಲ್ಕತ್ತಾದಲ್ಲಿ ಬಂಗಾಳಿ ಬ್ರಾಹ್ಮಣ ಕುಟುಂಬದಲ್ಲಿ ಜನಿಸಿದರು. ಭಾರತೀಯ ರಾಜಕಾರಣಿಯಾಗಿ, ನ್ಯಾಯವಾದಿಯಾಗಿ ಮತ್ತು ಶಿಕ್ಷಣ ತಜ್ಞನಾಗಿ ಅವರು ಸಾಕಷ್ಟು ಹೆಸರು ಮಾಡಿದ್ದಾರೆ. 1953ರ ಜೂನ್ 23ರಂದು ಅವರು ಇಹಲೋಕವನ್ನು ತ್ಯಜಿಸಿದರು.
Remembering Dr. Syama Prasad Mookerjee on his Punya Tithi. His noble ideals, rich thoughts and commitment to serve people will continue to inspire us. His efforts towards national integration will never be forgotten.
— Narendra Modi (@narendramodi) June 23, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.