ಶ್ರೀನಗರ: ಕಾಶ್ಮೀರದ ಪ್ರತ್ಯೇಕತಾವಾದಿ ನಾಯಕರುಗಳನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಮಟ್ಟದ ಸಭೆಗೂ ಮುನ್ನ ಮಾತುಕತೆಗೆ ಆಗಮಿಸುವಂತೆ ಆಹ್ವಾನಿಸಿದ ಪಾಕಿಸ್ಥಾನಕ್ಕೆ ಭಾರತ ಕಠಿಣ ಸಂದೇಶವನ್ನು ರವಾನಿಸಿದೆ.
ಹುರಿಯತ್ ಕಾನ್ಫರೆನ್ಸ್ ಮುಖಂಡ ಸಯೀದ್ ಅಲಿ ಶಾ ಗಿಲಾನಿ, ಹುರಿಯತ್ ಗ್ರೂಪ್ ಅಧ್ಯಕ್ಷ ಮಿರ್ವಾಐ ಉಮರ್ ಫಾರೂಖ್, ಹುರಿಯತ್ ಅಬ್ಬಾಸ್ ಅನ್ಸಾರಿಯನ್ನು ಗೃಹಬಂಧನದಲ್ಲಿ ಇಡಲಾಗಿದೆ.
ದೆಹಲಿಯಲ್ಲಿ ನಡೆಯುವ ರಾಷ್ಟ್ರೀಯ ಭದ್ರತಾ ಸಲಹೆಗಾರರ ಸಭೆಗೂ ಮುನ್ನ ಪಾಕಿಸ್ಥಾನದ ವಿದೇಶಾಂಗ ಸಚಿವ ಸತ್ರಾಝ್ ಅಜೀಜ್ ಅವರನ್ನು ಭೇಟಿಯಾಗುವಂತೆ ಈ ಪ್ರತ್ಯೇಕತಾವಾದಿಗಳಿಗೆ ಪಾಕಿಸ್ಥಾನ ಸೂಚಿಸಿತ್ತು, ಇದಕ್ಕೆ ಪ್ರತ್ಯೇಕತಾವಾದಿಗಳು ಸಮ್ಮತಿಸಿದ್ದರು.
ಇದಕ್ಕೆ ಭಾರತ ತೀವ್ರ ವಿರೋಧ ವ್ಯಕ್ತಪಡಿಸಿದೆ. ಇದೀಗ ಪ್ರತ್ಯೇಕತಾವಾದಿಗಳು ಸತ್ರಾಝ್ ಅವರನ್ನು ಭೇಟಿಯಾಗದಂತೆ ಗೃಹಬಂಧನದಲ್ಲಿ ಇಡಲಾಗಿದೆ.
ಆಗಸ್ಟ್ 23ರಂದು ಸತ್ರಾಝ್ ಅಜೀಜ್ ಅವರು ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ಅವರ ನಡುವೆ ದೆಹಲಿಯಲ್ಲಿ ಮಾತುಕತೆ ನಡೆಯಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.