ನವದೆಹಲಿ: ಜುಲೈ 1 ರಿಂದ ಸ್ಥಳೀಯರಿಗೆ ಚಾರ್ಧಾಮ್ ಯಾತ್ರೆಯನ್ನು ಭಾಗಶಃ ತೆರೆಯಲು ಉತ್ತರಾಖಂಡ ಸಂಪುಟ ಶುಕ್ರವಾರ ನಿರ್ಧರಿಸಿದೆ. ಚಮೋಲಿ, ಉತ್ತರಕಾಶಿ ಮತ್ತು ರುದ್ರಪ್ರಯಾಗ್ ಯಾತ್ರಾರ್ಥಿಗಳಿಗೆ ಚಾರ್ಧಾಮ್ ಯಾತ್ರೆಯ ಮಾರ್ಗಸೂಚಿಗಳನ್ನು ಹೊರಡಿಸಲು ರಾಜ್ಯ ಸಚಿವ ಸಂಪುಟ ನಿರ್ಧರಿಸಿದೆ.
ರಾಜ್ಯ ಸರ್ಕಾರದ ಪ್ರಕಾರ, ಯಾತ್ರಿಕರಿಗೆ ಅಗತ್ಯವಿರುವ ಎಲ್ಲ ವ್ಯವಸ್ಥೆಗಳನ್ನು ಮಾಡಲಾಗುವುದು ಮತ್ತು ಕ್ರಮ ಕೈಗೊಳ್ಳಲಾಗುವುದು. ಎಲ್ಲಾ ಅರ್ಚಕರಿಗೆ ಮೊದಲೇ ಲಸಿಕೆ ನೀಡಲಾಗುವುದು ಎಂದು ಸಂಪುಟ ತಿಳಿಸಿದೆ.
ಮಾಧ್ಯಮಗಳನ್ನುದ್ದೇಶಿಸಿ ಮಾತನಾಡಿದ ಉತ್ತರಾಖಂಡ ಸರ್ಕಾರದ ವಕ್ತಾರ ಸುಬೋಧ್ ಯುನಿಯಾಲ್ ಅವರು, ಜುಲೈ 1 ರಿಂದ ಕ್ರಮವಾಗಿ ಚಮೋಲಿ, ರುದ್ರಪ್ರಯಾಗ್ ಮತ್ತು ಉತ್ತರಕಾಶಿ ಜಿಲ್ಲೆಗಳ ನಿವಾಸಿಗಳಿಗೆ ಬದ್ರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿ ತೆರೆಯಲಾಗುವುದು ಎಂದಿದ್ದಾರೆ.
“ಆರ್ಟಿ-ಪಿಸಿಆರ್ / ರಾಪಿಡ್ ಆಂಟಿಜೆನ್ ಪರೀಕ್ಷಾ ವರದಿಯ ಪ್ರತಿ ಯಾತ್ರಿಕರಿಗೆ ಕಡ್ಡಾಯವಾಗಿರುತ್ತದೆ ಮತ್ತು ದೇವಾಲಯಗಳಿಗೆ ಭೇಟಿ ನೀಡುವಾಗ ಕೋವಿಡ್ ಸೂಕ್ತ ನಡವಳಿಕೆಗಳನ್ನು ಅನುಸರಿಸಬೇಕು” ಎಂದು ಯುನಿಯಾಲ್ ಹೇಳಿದ್ದಾರೆ.
ಯಾತ್ರಾರ್ಥಿಗಳ ವ್ಯವಸ್ಥೆ ಬಗ್ಗೆ ಸಂಬಂಧಪಟ್ಟ ಜಿಲ್ಲಾಡಳಿತದೊಂದಿಗೆ ಸಮನ್ವಯ ಸಾಧಿಸುವ ನಾಲ್ಕು ಹಿಮಾಲಯ ದೇವಾಲಯಗಳಿಗೆ ಹಿರಿಯ ಅಧಿಕಾರಿಯನ್ನು ನೇಮಿಸಲಾಗುವುದು ಎಂದು ಯುನಿಯಾಲ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.