ನವದೆಹಲಿ: ಜನವರಿಯಲ್ಲಿ ಇಸ್ರೇಲ್ ರಾಯಭಾರ ಕಚೇರಿ ಬಳಿ ಕಡಿಮೆ ತೀವ್ರತೆಯ ಐಇಡಿ ಸ್ಫೋಟಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ವಿಶೇಷ ವಿಭಾಗ ಕಾರ್ಗಿಲ್ನಲ್ಲಿ ನಾಲ್ಕು ವಿದ್ಯಾರ್ಥಿಗಳನ್ನು ಬಂಧಿಸಿದೆ.
ಕೇಂದ್ರೀಯ ಸಂಸ್ಥೆ ಮತ್ತು ಸ್ಥಳೀಯ ಪೊಲೀಸರ ಜಂಟಿ ಕಾರ್ಯಾಚರಣೆಯಲ್ಲಿ ದೆಹಲಿ ಪೊಲೀಸ್ ವಿಶೇಷ ವಿಭಾಗವು ಕಾರ್ಗಿಲ್ನಿಂದ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದುಕೊಂಡಿದೆ. ಥಂಗ್ ಗ್ರಾಮದ ನಿವಾಸಿಗಳಾದ ಇವರನ್ನು ಗುರುವಾರ ದೆಹಲಿಗೆ ಕರೆತರಲಾಗಿದೆ ಎಂದು ಮೂಲಗಳು ತಿಳಿಸಿವೆ.
ಈ ನಾಲ್ವರು ವಿದ್ಯಾರ್ಥಿಗಳನ್ನು ನಜೀರ್ ಹುಸೇನ್ (26), ಜುಲ್ಫಿಕರ್ ಅಲಿ ವಜೀರ್ (25), ಐಯಾಜ್ ಹುಸೇನ್ (28), ಮತ್ತು ಮುಜಮ್ಮಿಲ್ ಹುಸೇನ್ (25) ಎಂದು ಗುರುತಿಸಲಾಗಿದೆ.
ಐಯಾಜ್ ಹುಸೇನ್ ದೆಹಲಿಯ ರಾಮ್ಜಾಸ್ ಕಾಲೇಜಿನಿಂದ ಪದವಿ ಪಡೆದಿದ್ದಾರೆ ಎಂದು ತಿಳಿದುಬಂದಿದೆ. ಅವರ ಸಹೋದರ ಮುಜಮ್ಮಿಲ್ ಹುಸೇನ್ ಪಂಜಾಬ್ ವಿಶ್ವವಿದ್ಯಾಲಯದಿಂದ ಸ್ನಾತಕೋತ್ತರ ಪದವಿ ಪಡೆದುಕೊಂಡಿದ್ದಾನೆ. ಜುಲ್ಫಿಕರ್ ಅಲಿ ದೆಹಲಿಯ ದಯಾಲ್ ಸಿಂಗ್ ಕಾಲೇಜಿನಿಂದ ವಾಣಿಜ್ಯದಲ್ಲಿ (ದೂರಶಿಕ್ಷಣ) ಸ್ನಾತಕೋತ್ತರ ಪದವಿ ಮಾಡುತ್ತಿದ್ದಾನೆ. ನಜೀರ್ ಹುಸೇನ್ ಪಂಜಾಬ್ ವಿಶ್ವವಿದ್ಯಾಲಯದಿಂದ ದೈಹಿಕ ಶಿಕ್ಷಣದಲ್ಲಿ ಸ್ನಾತಕೋತ್ತರ ಪದವಿ ಮಾಡುತ್ತಿದ್ದಾನೆ ಎನ್ನಲಾಗಿದೆ.
“ರಾಷ್ಟ್ರ ರಾಜಧಾನಿಯಲ್ಲಿ ಭಯೋತ್ಪಾದಕ ಚಟುವಟಿಕೆಗಳನ್ನು ಯೋಜಿಸುವ ಮತ್ತು ಕಾರ್ಯಗತಗೊಳಿಸುವ ಪಿತೂರಿಗೆ ಸಂಬಂಧಿಸಿದಂತೆ ಇವರನ್ನು ಬಂಧಿಸಲಾಗಿದೆ. ನಾವು ಅವರನ್ನು ಟ್ರಾನ್ಸಿಟ್ ರಿಮಾಂಡ್ಗೆ ಕರೆದೊಯ್ದಿದ್ದೇವೆ ಮತ್ತು ವಿಚಾರಣೆಗಾಗಿ ದೆಹಲಿಗೆ ಕರೆತಂದಿದ್ದೇವೆ ”ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ನವದೆಹಲಿಯ ಇಸ್ರೇಲ್ ರಾಯಭಾರ ಕಚೇರಿಯ ಬಳಿಯ ಎಪಿಜೆ ಅಬ್ದುಲ್ ಕಲಾಂ ರಸ್ತೆಯಲ್ಲಿ ಜನವರಿ 29 ರಂದು ಸಂಜೆ 5.05 ರ ಸುಮಾರಿಗೆ ಅತ್ಯಂತ ಕಡಿಮೆ ತೀವ್ರತೆಯ ಸುಧಾರಿತ ಸ್ಫೋಟಕ ಸಾಧನೆ ಸ್ಫೋಟಗೊಂಡಿತ್ತು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.