ನವದೆಹಲಿ : ದೇಶಾದ್ಯಂತ ವನ್ಯಜೀವಿಗಳಿಗೆ ಅಗತ್ಯ ನೀರು ಮತ್ತು ಆಹಾರ ಒದಗಿಸಿ ಪ್ರಾಣಿ-ಮಾನವ ಸಂಘರ್ಷ ತಪ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲಾನಯನ ಯೋಜನೆ ಮಾದರಿಯ ಮಹತ್ವದ ಯೋಜನೆ ಜಾರಿಗೊಳಿಸಲಿದೆ ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಹೇಳಿದ್ದಾರೆ.
ಈ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲು ಕೈಗೊಂಡಿದ್ದ ಲೈಡರ್ ತಂತ್ರಜ್ಞಾನ ಸಮೀಕ್ಷಾ ವರದಿ ಮತ್ತು ಹತ್ತು ರಾಜ್ಯಗಳಿಗೆ ಸಂಬಂಧಿಸಿದಂತೆ ರೂಪಿಸಲಾಗಿರುವ ಸಮಗ್ರ ಕ್ರಿಯಾ ಯೋಜನೆಗಳನ್ನು ಬಿಡುಗಡೆ ಮಾಡಿದರು.
ಬಳಿಕ ಅವರು, ದೇಶದಲ್ಲೇ ಮೊಟ್ಟ ಮೊದಲ ಬಾರಿಗೆ 26 ರಾಜ್ಯಗಳಲ್ಲಿ ಸಮೀಕ್ಷೆ ಮೂಲಕ ವನ್ಯಜೀವಿಗಳಿಗೆ ನೀರು, ಆಹಾರದ ವ್ಯವಸ್ಥೆ ಮಾಡುವ ಬಗ್ಗೆ ಪರಿಶೀಲಿಸಲಾಗಿದೆ. ಈ ವರ್ಷದ ಮಳೆಗಾಲ ಮುಗಿದ ಕೂಡಲೇ ನೀರು ಸಂಗ್ರಹಣೆ, ನೀರು ಇಂಗುವಂತಹ ಕಾಮಗಾರಿಗಳು, ಕಾಡು ಪ್ರಾಣಿಗಳಿಗೆ ಆಹಾರ ಉತ್ಪಾದನೆಗೆ ಬೇಕಾದ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಈ ಯೋಜನೆಗಳು ಅರಣ್ಯ ಪ್ರದೇಶಗಳಲ್ಲಿ ನೀರು ಮತ್ತು ಆಹಾರ ಪ್ರಮಾಣ ಹೆಚ್ಚಿಸಲು ಸಹಾಯ ಮಾಡುತ್ತದೆ. ಅಲ್ಲದೆ, ಮಾನವ-ಪ್ರಾಣಿಗಳ ಸಂಘರ್ಷ ಕಡಿಮೆ ಮಾಡುತ್ತದೆ, ಅಂತರ್ಜಲ ಮರುಪೂರಣಕ್ಕೆ ಅನುಕೂಲವಾಗುವುದರೊಂದಿಗೆ, ಅರಣ್ಯ ಸಮೀಪದ ಸಮುದಾಯಗಳಿಗೂ ಸಹಾಯವಾಗಲಿದೆ ಎಂದು ಹೇಳಿದರು.
ಹಣಕಾಸು ಆಯೋಗ ಈ ಬಾರಿ ರಾಜ್ಯಗಳಿಗೆ ಶೇಕಡ 15ರಷ್ಟು ಹೆಚ್ಚುವರಿ ಅನುದಾನ ಬಿಡುಗಡೆ ಮಾಡಿದೆ ಎಂದರು.
Today launched detailed project reports (DPRs) on LIDAR Survey of water and fodder augmentation in forest areas of 10 states. For the first time Central funds have been used to survey forest areas of 26 states at such a large scale.@moefcc @PMOIndia pic.twitter.com/l0jHjpVSOG
— Prakash Javadekar (@PrakashJavdekar) June 25, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.