ನವದೆಹಲಿ: ಕೇಂದ್ರರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಮೂರು ದಿನಗಳ ಭೇಟಿಗಾಗಿ ನಿನ್ನೆ ಲೇಹ್ ಆಗಮಿಸಿದರು. ಗಡಿ ರಸ್ತೆಗಳ ಸಂಸ್ಥೆ (ಬಿಆರ್ಒ) ನಿರ್ಮಿಸಿರುವ ಹಲವಾರು ಸೇತುವೆಗಳನ್ನು ಸಚಿವರು ಇಂದು ಉದ್ಘಾಟಿಸಲಿದ್ದಾರೆ.
ಸೇನಾ ಮುಖ್ಯಸ್ಥ ಜನರಲ್ ಎಂ.ಎಂ.ನಾರವಾನೆ ಅವರು ಭೇಟಿಯ ಸಂದರ್ಭದಲ್ಲಿ ಸಿಂಗ್ ಅವರಿಗೆ ಸಾಥ್ ನೀಡಿದ್ದಾರೆ. ರಾಜನಾಥ್ ಸಿಂಗ್ ಅವರು ಲೇಹ್ನಲ್ಲಿನ ಯುದ್ಧ ವೀರರು ಮತ್ತು ಮಾಜಿ ಸೈನಿಕರೊಂದಿಗೆ ಸಂವಹನ ನಡೆಸಿದರು.
ಲಡಾಖ್ ಪ್ರದೇಶಕ್ಕಾಗಿನ ಮೂರು ದಿನಗಳ ಭೇಟಿಯ ವೇಳೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು 300ಕ್ಕೂ ಅಧಿಕ ಯುದ್ಧ ವೀರರು ಮತ್ತು ಲೇಹ್ನ ಮಾಜಿ ಸೈನಿಕರೊಂದಿಗೆ ಸಂವಹನ ನಡೆಸಿದರು. ದೇಶಕ್ಕಾಗಿ ಅವರು ನೀಡಿದ ಕೊಡುಗೆಗಳನ್ನು ಶ್ಲಾಘಿಸಿದ ರಾಜನಾಥ್ ಸಿಂಗ್ ಸಭೆಯಲ್ಲಿ ಅವರಿಗೆ ತಲೆಬಾಗಿ ನಮಸ್ಕರಿಸಿದರು.
ಮಾಜಿ ಸೈನಿಕರನ್ನು ಸಂತೋಷವಾಗಿಡುವುದು ಮತ್ತು ಅವರ ಕುಂದುಕೊರತೆಗಳನ್ನು ಪರಿಹರಿಸಲು ಎಲ್ಲ ಪ್ರಯತ್ನಗಳನ್ನು ಮಾಡುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದು ಸಚಿವರು ಹೇಳಿದರು.
ಕೋವಿಡ್ ಸಾಂಕ್ರಾಮಿಕ ಸಮಯದಲ್ಲಿ ನಿವೃತ್ತ ಸೈನಿಕರಿಗೆ ಅವರ ಮನೆಗೆ ಸೇವೆ ಸಲ್ಲಿಸುವ ಐವಿಆರ್ಎಸ್ ಸೌಲಭ್ಯಗಳು ಮತ್ತು ಆನ್ಲೈನ್ ಪೋರ್ಟಲ್ಗಳನ್ನು ಸಚಿವರು ಪಟ್ಟಿ ಮಾಡಿದರು. ನಿವೃತ್ತಿಯ ನಂತರದ ಪುನರ್ವಸತಿ ಸಮಸ್ಯೆಗಳನ್ನು ಸಹ ಶೀಘ್ರದಲ್ಲಿಯೇ ಪರಿಹರಿಸಲಾಗುವುದು ಎಂದು ಸಚಿವರು ಭರವಸೆ ನೀಡಿದರು.
ಒಆರ್ಪಿ ಅನುಷ್ಠಾನವನ್ನು ಉಲ್ಲೇಖಿಸಿದ ರಾಜನಾಥ್ ಸಿಂಗ್, ನರೇಂದ್ರ ಮೋದಿ ನೇತೃತ್ವದ ಸರ್ಕಾರ ಸೈನಿಕರ ಕಲ್ಯಾಣಕ್ಕೆ ಬದ್ಧವಾಗಿದೆ ಎಂದು ಹೇಳಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.