ಲಡಾಖ್: ಲಡಾಖ್ ಕೇಂದ್ರಾಡಳಿತ ಪ್ರದೇಶವಾದ ನಂತರ ಅಲ್ಲಿ ಭಯೋತ್ಪಾದನೆ ಕಡಿಮೆಯಾಗಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸೋಮವಾರ ಹೇಳಿದ್ದಾರೆ.
“ಕೇಂದ್ರಾಡಳಿತ ಪ್ರದೇಶವಾದ ನಂತರ, ಲಡಾಕ್ನಲ್ಲಿ ಭಯೋತ್ಪಾದನೆ ಕಡಿಮೆಯಾಗಿದೆ. ಸೇನೆ, ಅರೆಸೈನಿಕ ಪಡೆಗಳು ಮತ್ತು ಸ್ಥಳೀಯ ಪೊಲೀಸರಲ್ಲಿ ಪರಸ್ಪರ ಹೊಂದಾಣಿಕೆ ಇದೆ. ಇಲ್ಲಿ ಭಯೋತ್ಪಾದನೆ ಕಡಿಮೆಯಾಗಿದೆ ಎಂಬ ಅಂಕಿಅಂಶಗಳು ನಮ್ಮಲ್ಲಿವೆ” ಎಂದು ಸಚಿವರು ಹೇಳಿದ್ದಾರೆ.
ಜಮ್ಮು -ಕಾಶ್ಮೀರ ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶವಾಗಿ ಘೋಷಿಸಿದ ಹಿಂದೆ ರಾಜಕೀಯ ಪಿತೂರಿ ಇದೆ ಎಂದು ಹಲವಾರು ಸಂಶಯಿಸಿದ್ದರು, ರಾಜಕೀಯ ಹಿತಾಸಕ್ತಿ ಅಡಗಿದೆ ಎಂದಿದ್ದರು. ಆದರೆ ಎರಡೂ ಪ್ರದೇಶಗಳಲ್ಲಿ ರಾಜಕೀಯ ಪ್ರಕ್ರಿಯೆಯನ್ನು ತ್ವರಿತವಾಗಿ ಪುನಃ ಪ್ರಾರಂಭಿಸಲು ಕೇಂದ್ರ ಬಯಸಿದೆ ಎಂದು ಅವರು ಮಾಹಿತಿ ನೀಡಿದರು.
“ಜಮ್ಮು ಮತ್ತು ಕಾಶ್ಮೀರ ಮತ್ತು ಲಡಾಖ್ ಅನ್ನು ಕೇಂದ್ರಾಡಳಿತ ಪ್ರದೇಶಗಳನ್ನಾಗಿ ಮಾಡಿದ ನಂತರ, ಪ್ರಧಾನ ಮಂತ್ರಿಯ ಉದ್ದೇಶವನ್ನು ರಾಜಕೀಯ ಹಿತಾಸಕ್ತಿ ಎಂದು ಅನೇಕರು ಅನುಮಾನಿಸಿದರು. ಆದರೆ ರಾಜಕೀಯ ಪ್ರಕ್ರಿಯೆಯು ಎರಡೂ ಪ್ರದೇಶಗಳಲ್ಲಿ ಪ್ರಾರಂಭವಾಗಬೇಕೆಂದು ಮೋದಿ ಬಯಸುತ್ತಾರೆ. ಅವರು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಮುಖಂಡರೊಂದಿಗೆ ಮಾತನಾಡಿದ್ದಾರೆ ಮತ್ತು ಲಡಾಖ್ ನಾಯಕರೊಂದಿಗೂ ಶೀಘ್ರದಲ್ಲೇ ಮಾತನಾಡಲಿದ್ದಾರೆ” ಎಂದಿದ್ದಾರೆ.
ಸೇನೆಯನ್ನು ಶ್ಲಾಘಿಸಿದ ಅವರು, “ನಮ್ಮ ಸೈನ್ಯವೂ ಸೂಕ್ಷ್ಮವಾಗಿದೆ. ಭಯೋತ್ಪಾದಕರು ಶರಣಾಗಲು ಬಯಸಿದರೆ ಮತ್ತು ಮುಖ್ಯವಾಹಿನಿಗೆ ಬರಲು ಬಯಸಿದ್ದರೂ ಸಹ ಅವರಿಗೆ ಈ ಅವಕಾಶವನ್ನು ನೀಡಲಾಗುತ್ತದೆ” ಎಂದು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.