ನವದೆಹಲಿ: ಶ್ರೀನಗರದ ಮಾಲೂರಾ ಪರಿಂಪೋರಾದಲ್ಲಿ ಭದ್ರತಾ ಪಡೆಗಳು ನಡೆಸಿದ ಎನ್ಕೌಂಟರ್ಗೆ ಪಾಕಿಸ್ಥಾನ ಮೂಲದ ಭಯೋತ್ಪಾದಕ ಮತ್ತು ಲಷ್ಕರ್-ಎ-ತೈಬಾ ಕಮಾಂಡರ್ ಅಬ್ರಾರ್ ಸಾವನ್ನಪ್ಪಿದ್ದಾನೆ ಎಂದು ವರದಿಗಳು ತಿಳಿಸಿವೆ.
“ನಿನ್ನೆ ಬಂಧಿಸಲ್ಪಟ್ಟ ಉನ್ನತ ಎಲ್ಇಟಿ ಕಮಾಂಡರ್ ಅಬ್ರಾರ್, ತನ್ನ ಎಕೆ -47 ರೈಫಲ್ ಅನ್ನು ಮನೆಯೊಂದರಲ್ಲಿ ಇಟ್ಟಿರುವುದಾಗಿ ವಿಚಾರಣೆಯ ಸಮಯದಲ್ಲಿ ಬಹಿರಂಗಪಡಿಸಿದ್ದ. ಈ ಹಿನ್ನೆಲೆಯಲ್ಲಿ ಶಸ್ತ್ರಾಸ್ತ್ರವನ್ನು ವಶಪಡಿಸಿಕೊಳ್ಳಲು ಭದ್ರತಾ ಸಿಬ್ಬಂದಿ ಮನೆಯೊಳಗೆ ಪ್ರವೇಶಿಸುತ್ತಿದ್ದಾಗ, ಮನೆಯೊಳಗೆ ಅಡಗಿಕೊಂಡಿದ್ದ ಅವನ ಸಹಚರನೊಬ್ಬ ಗುಂಡು ಹಾರಿಸಿದ ” ಎಂದು ಐಜಿಪಿ ಕಾಶ್ಮೀರ ವಿಜಯ್ ಕುಮಾರ್ ತಿಳಿಸಿದ್ದಾರೆ.
ನಂತರದ ಗುಂಡಿನ ಚಕಮಕಿಯಲ್ಲಿ, ಮನೆಯೊಳಗಿನಿಂದ ಗುಂಡು ಹಾರಿಸಿದ ವಿದೇಶಿ ಭಯೋತ್ಪಾದಕನನ್ನು ಕೊಲ್ಲಲಾಗಿದೆ ಮತ್ತು ಅಬ್ರಾರ್ ಸಹ ಕೊಲ್ಲಲ್ಪಟ್ಟ ಎಂದು ವಿಜಯ್ ಕುಮಾರ್ ಹೇಳಿದ್ದಾರೆ. ಎರಡು ಎಕೆ -47 ರೈಫಲ್ಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ.
“ಆರಂಭದಲ್ಲಿ ಗುಂಡಿನ ದಾಳಿಯಲ್ಲಿ, 3 ಸಿಆರ್ಪಿಎಫ್ ಸಿಬ್ಬಂದಿ ಗಾಯಗೊಂಡರು ಮತ್ತು ಶೋಧ ಕಾರ್ಯಾಚರಣೆಯ ವೇಳೆ ಭದ್ರತಾ ಸಿಬ್ಬಂದಿ ಜೊತೆಗಿದ್ದ ಅಬ್ರಾರ್ಗೂ ಗಾಯವಾಗಿತ್ತು. ಗಾಯಗೊಂಡ ಸಿಬ್ಬಂದಿಯನ್ನು ಸ್ಥಳಾಂತರಿಸಲಾಯಿತು ಮತ್ತು ಉಳಿದವರು ಕಾರ್ಯಾಚರಣೆ ಮುಂದುವರೆಸಿದರು. ತಕ್ಷಣವೇ ಮನೆಯನ್ನು ಸುತ್ತುವರಿಯಲಾಯಿತು. ತೀವ್ರ ಸ್ವರೂಪದಲ್ಲಿ ಎನ್ಕೌಂಟರ್ ನಡೆಸಲಾಯಿತು” ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.