ಲಕ್ನೋ: ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಇಂದು ಲಕ್ನೋದಲ್ಲಿ ಡಾ.ಭೀಮರಾವ್ ಅಂಬೇಡ್ಕರ್ ಸ್ಮಾರಕ ಮತ್ತು ಸಾಂಸ್ಕೃತಿಕ ಕೇಂದ್ರಕ್ಕೆ ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಲೋಕಭವನದಲ್ಲಿ ನಡೆದ ಸರಳ ಕಾರ್ಯಕ್ರಮದಲ್ಲಿ ಶಂಕುಸ್ಥಾಪನೆ ನೆರವೇರಿದೆ.
ಈ ಸಂದರ್ಭದಲ್ಲಿ ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ, ಉಪ ಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ, ರಾಜ್ಯಪಾಲೆ ಆನಂದಿ ಬೆನ್ ಪಟೇಲ್ ಉಪಸ್ಥಿತರಿದ್ದರು.
ಇಂದು ಬೆಳಿಗ್ಗೆ ಅಂಬೇಡ್ಕರ್ ಸಂಸ್ಕೃತಿ ಕೇಂದ್ರಕ್ಕೆ ಅಡಿಪಾಯ ಹಾಕಿದ ನಂತರ ರಾಷ್ಟ್ರಪತಿಗಳು ವಿಶೇಷ ವಿಮಾನದಲ್ಲಿ ನವದೆಹಲಿಗೆ ಮರಳಲಿದ್ದಾರೆ. ಉದ್ದೇಶಿತ ಅಂಬೇಡ್ಕರ್ ಸಂಸ್ಕೃತಿ ಕೇಂದ್ರವನ್ನು ರಾಜ್ಯ ಸಂಸ್ಕೃತಿ ಸಚಿವಾಲಯ ಅಭಿವೃದ್ಧಿಪಡಿಸುತ್ತಿದೆ. ಸಾಂಸ್ಕೃತಿಕ ಕೇಂದ್ರದಲ್ಲಿ 750 ಆಸನಗಳ ಸಭಾಂಗಣ, ಗ್ರಂಥಾಲಯ, ಪಿಕ್ಚರ್ ಗ್ಯಾಲರಿ, ಮ್ಯೂಸಿಯಂ, ವಿವಿಧೋದ್ದೇಶ ಸಭಾಂಗಣ, ವಸತಿ ನಿಲಯ, ಕೆಫೆಟೇರಿಯಾ, ಪಾರ್ಕಿಂಗ್ ಮತ್ತು ಇತರ ಮೂಲ ಸೌಲಭ್ಯಗಳಿವೆ.
ಈ ಯೋಜನೆಗಾಗಿ ರಾಜ್ಯ ಸರ್ಕಾರ ಸುಮಾರು 45.04 ಕೋಟಿ ರೂ ವ್ಯಯಿಸಲಿದೆ. ಅಂಬೇಡ್ಕರ್ ಸಾಂಸ್ಕೃತಿಕ ಕೇಂದ್ರವು ಅದ್ಭುತ ಭೂದೃಶ್ಯದ ಜೊತೆಗೆ ಡಾ.ಭೀಮರಾವ್ ಅಂಬೇಡ್ಕರ್ ಅವರ ಭವ್ಯವಾದ ಪ್ರತಿಮೆಯನ್ನು ಹೊಂದಲಿದ್ದು, 3 ಎಕರೆ ಸರ್ಕಾರಿ ಭೂಮಿಯಾದ್ಯಂತ ಹರಡಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.