ನವದೆಹಲಿ: ದೇಶದ ವ್ಯಾಪಾರಿ ಸಮುದಾಯಗಳ ಸಬಲೀಕರಣಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ಮೋದಿ ಅವರು ಹೇಳಿದ್ದಾರೆ.
ಚಿಲ್ಲರೆ ವ್ಯಾಪಾರ ಮತ್ತು ಸಗಟು ವ್ಯಾಪಾರವನ್ನು ಎಂಎಸ್ಎಂಇಗೆ ಸೇರಿಸುವ ಮಹತ್ವದ ಹೆಜ್ಜೆಯನ್ನು ಸರ್ಕಾರ ತೆಗೆದುಕೊಂಡಿದೆ. ಇದು ವ್ಯಾಪಾರಿಗಳಿಗೆ ಸುಲಭವಾದ ಹಣಕಾಸು ಹಾಗೂ ಇತರ ಹಲವಾರು ಪ್ರಯೋಜನಗಳನ್ನು ಪಡೆಯಲು ಮತ್ತು ವ್ಯವಹಾರವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನಮ್ಮ ವ್ಯಾಪಾರಿಗಳಿಗೆ ಅಧಿಕಾರ ನೀಡಲು ನಾವು ಬದ್ಧರಾಗಿದ್ದೇವೆ ಎಂದು ಅವರು ತಿಳಿಸಿದ್ದಾರೆ.
Our government has taken a landmark step of including retail and wholesale trade as MSME. This will help crores of our traders get easier finance, various other benefits and also help boost their business.
We are committed to empowering our traders. https://t.co/FTdmFpaOaU
— Narendra Modi (@narendramodi) July 3, 2021
ಹಾಗೆಯೇ ಈ ನಿರ್ಧಾರವು 250 ಕೋಟಿ ರೂ. ವರೆಗೆ ವಹಿವಾಟು ಹೊಂದಿರುವ ಚಿಲ್ಲರೆ ಮತ್ತು ಸಗಟು ವ್ಯಾಪಾರಿಗಳಿಗೆ ‘ಆತ್ಮನಿರ್ಭರ ಭಾರತ’ ದಡಿಯಲ್ಲಿ ಘೋಷಿಸಲಾದ ವಿವಿಧ ನೆರವನ್ನು ಪಡೆಯಲು ತಕ್ಷಣದಿಂದಲೇ ನೆರವಾಗಲಿದೆ. ವ್ಯಾಪಾರ ವಹಿವಾಟು ನಡೆಸುವವರ ಭವಿಷ್ಯದ ಹಿತದೃಷ್ಟಿಯಿಂದ ಈ ನಿರ್ಣಯ ಮಹತ್ವದ್ದಾಗಿದೆ.
ಈ ಸಂಬಂಧ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು, ಚಿಲ್ಲರೆ ಮತ್ತು ಸಗಟು ವ್ಯಾಪಾರ ವಲಯವನ್ನು ಎಂಎಸ್ಎಂಇ ಉದ್ಯಮದ ವ್ಯಾಪ್ತಿಗೆ ತರಲಾಗುವುದು ಎಂದು ಘೋಷಣೆ ಮಾಡಿದ್ದರು. ಈ ವ್ಯವಸ್ಥೆಯಿಂದಾಗಿ ಚಿಲ್ಲರೆ ಹಾಗೂ ಸಗಟು ವ್ಯಾಪಾರ ವಲಯದವರಿಗೂ ಆರ್ಬಿಐ ಮಾರ್ಗಸೂಚಿ ಅನ್ವಯ ಆದ್ಯತೆ ಮೇರೆಗೆ ಸಾಲ ಸೌಲಭ್ಯ ಲಭ್ಯವಾಗಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.