ಡೆಹ್ರಾಡೂನ್: ಉತ್ತರಾಖಂಡದ ನೂತನ ಮುಖ್ಯಮಂತ್ರಿಯಾಗಿ ಬಿಜೆಪಿ ಪಕ್ಷದ ಪುಷ್ಕರ್ ಸಿಂಗ್ ದಾಮಿ ಅವರನ್ನು ಆಯ್ಕೆ ಮಾಡಲಾಗಿದೆ ಈ ಹಿಂದೆ ಮುಖ್ಯಮಂತ್ರಿಯಾಗಿದ್ದ ತಿರಥ್ ಸಿಂಗ್ ರಾವತ್ ಅವರು ಶುಕ್ರವಾರ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು.
ರಾವತ್ ಅವರ ರಾಜೀನಾಮೆ ಬಳಿಕ ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಡೆಹ್ರಾಡೂನ್ನ ಬಿಜೆಪಿಯ ಕೇಂದ್ರ ಕಚೇರಿಗೆ ಆಗಮಿಸಿದ್ದರು. ಪಕ್ಷದ ಇತರ ನಾಯಕರ ಜೊತೆಗೆ ಚರ್ಚೆ ನಡೆಸಿ ನೂತನ ಸಿಎಂ ಆಯ್ಕೆ ಪ್ರಕ್ರಿಯೆ ನಡೆಸಿದ್ದಾರೆ. ಹಾಗೆಯೇ ಸಿಎಂ ಸ್ಥಾನಕ್ಕೆ ಸೂಚಿತವಾದ ಹೆಸರುಗಳಲ್ಲಿ ದಾಮಿ ಅವರ ಹೆಸರು ಅಗ್ರಸ್ಥಾನದಲ್ಲಿತ್ತು ಎಂಬುದಾಗಿಯೂ ಮೂಲಗಳು ತಿಳಿಸಿವೆ.
ಮೂಲಗಳ ಪ್ರಕಾರ ಮುಖ್ಯಮಂತ್ರಿ ಸ್ಥಾನಕ್ಕೆ 12 ಆಕಾಂಕ್ಷಿಗಳಿದ್ದು ದಾಮಿ ಅವರು ಮುಂಚೂಣಿಯಲ್ಲಿದ್ದರು. ದಾಮಿ ಅವರು ಉದಮಸಿಂಗ್ ನಗರ ಜಿಲ್ಲೆಯ ಖಟಿಮಾ ಕ್ಷೇತ್ರದ ಶಾಸಕರಾಗಿದ್ದು, ಬಿಜೆಪಿ ಯುವ ಮೋರ್ಚಾ ರಾಜ್ಯಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದಾರೆ. ವಿದ್ಯಾರ್ಥಿ ಪರಿಷತ್ನಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ವಿವಿಧ ಹುದ್ದೆಗಳನ್ನು ಅಲಂಕರಿಸಿದ್ದಾರೆ. ಯುವಜನತೆಯಲ್ಲಿ ಜನಪ್ರಿಯತೆಯನ್ನು ಹೊಂದಿದವರಾಗಿದ್ದಾರೆ.
ರಾವತ್ ಅವರು ತಾವು ಮುಖ್ಯಮಂತ್ರಿ ಸ್ಥಾನವನ್ನು ಅಲಂಕರಿಸಿದ ನಾಲ್ಕು ತಿಂಗಳೊಳಗೆ ರಾಜೀನಾಮೆ ಸಲ್ಲಿಸಿದ್ದು, ರಾಜ್ಯಪಾಲರಾದ ಬೇಬಿ ರಾಣಿ ಮೌರ್ಯ ಅವರಿಗೆ ರಾಜೀನಾಮೆ ಪತ್ರ ಹಸ್ತಾಂತರ ಮಾಡಿದ್ದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.