ನವದೆಹಲಿ: ಮೂರು ದಿನಗಳ ಹಿಮಾಚಲ ಪ್ರದೇಶ ಪ್ರವಾಸದಲ್ಲಿರು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರು ಇಂದು ಅಲ್ಲಿನ ಅಟಲ್ ಸುರಂಗವನ್ನು ಪರಿಶೀಲನೆ ಮಾಡಲಿದ್ದಾರೆ.
ನಿನ್ನೆಯೇ ಹಿಮಾಚಲ ಪ್ರದೇಶದತ್ತ ತೆರಳಿರುವ ಅವರು ಮುಖ್ಯಮಂತ್ರಿ ಜೈರಾಮ್ ಠಾಕೂರ್, ಕಾರ್ಯಕರ್ತರ ಜೊತೆಗೂ ಮಾತುಕತೆ ನಡೆಸಿದ್ದಾರೆ. ಇಂದು ಅಟಲ್ ಸುರಂಗ ವೀಕ್ಷಣೆ ಬಳಿಕ ಕುಲುಮನಾಲಯಲ್ಲಿ ನಡೆಯಲಿರುವ ಪಕ್ಷದ ಸಭೆಯಲ್ಲಿಯೂ ಭಾಗವಹಿಸಲಿದ್ದಾರೆ.
ಹಿಮಾಚಲ ಪ್ರದೇಶದಲ್ಲಿ ನಿರ್ಮಿಸಲಾಗಿದ ಈ ಸುರಂಗಕ್ಕೆ ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ ‘ಅಟಲ್ ಸುರಂಗ’ ಎಂದು ನಾಮಕರಣ ಮಾಡಲಾಗಿದೆ. ಇದು ಮನಾಲಿಯಿಂದ 25 ಕಿಮೀ ದೂರದಲ್ಲಿದ್ದು, 3,060 ಮೀಟರ್ ಎತ್ತರದಲ್ಲಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.