ನವದೆಹಲಿ: ಭಾರತೀಯ ಜನ ಸಂಘದ ಸಂಸ್ಥಾಪಕ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮ ದಿನದ ಪ್ರಯುಕ್ತ ಪ್ರಧಾನಿ ಮೋದಿ ಅವರು ಗೌರವ ಸಲ್ಲಿಸಿದ್ದಾರೆ. ಅವರ ಆದರ್ಶಗಳು ದೇಶದ ಲಕ್ಷಾಂತರ ಜನರಿಗೆ ಪ್ರೇರಣೆಯಾಗಿದೆ ಎಂದು ಅವರು ಹೇಳಿದರು.
ಈ ಸಂಬಂಧ ಟ್ವೀಟ್ ಮಾಡಿರುವ ಅವರು, ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಜನ್ಮದಿನದ ಪ್ರಯುಕ್ತ ನಾನು ಅವರಿಗೆ ಗೌರವ ಸಲ್ಲಿಸುತ್ತೇನೆ. ಅವರ ಉನ್ನತ ಆದರ್ಶಗಳು ರಾಷ್ಟ್ರದ ಲಕ್ಷಾಂತರ ಜನರಿಗೆ ಪ್ರೇರೇಪಣೆ ನೀಡುತ್ತಿದೆ. ಅವರು ತಮ್ಮ ಬದುಕನ್ನು ಭಾರತದ ಏಕತೆ ಮತ್ತು ಪ್ರಗತಿಗಾಗಿ ಮುಡಿಪಾಗಿಟ್ಟವರು. ಅವರೋರ್ವ ವಿದ್ವಾಂಸರು ಎಂದು ಮೋದಿ ಬಣ್ಣಿಸಿದ್ದಾರೆ.
ಮುಖರ್ಜಿ ಅವರು 1901 ರ ಜುಲೈ 6 ರಂದು ಕಲ್ಕತ್ತಾದಲ್ಲಿ ಜನಿಸಿದರು. 1951 ರಲ್ಲಿ ಆರ್ಎಸ್ಎಸ್ ಸಹಕಾರದ ಜೊತೆಗೆ ಭಾರತೀಯ ಜನಸಂಘವನ್ನು ಸ್ಥಾಪಿಸಿದರು. ಅವರು 1953 ಜೂನ್ 23 ರಂದು ಇಹಲೋಕ ತ್ಯಜಿಸಿದರು.
I bow to Dr. Syama Prasad Mookerjee on his Jayanti. His lofty ideals motivate millions across our nation. Dr. Mookerjee devoted his life towards India’s unity and progress. He also distinguished himself as a remarkable scholar and intellectual.
— Narendra Modi (@narendramodi) July 6, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.