ಬೆಂಗಳೂರು: ರಾಜ್ಯದ ಕರಾವಳಿ ಜಿಲ್ಲೆಗಳ ಭಾಗದಲ್ಲಿ ಕೈಗಾರಿಕೆಗಳ ಸ್ಥಾಪನೆಗೆ ಬೇಡಿಕೆ ಹೆಚ್ಚಿದೆ. ಹಾಗೆಯೇ ಈ ಭಾಗದಲ್ಲಿ ಕೈಗಾರಿಕಾ ಕಾರಿಡಾರ್ ನಿರ್ಮಾಣದ ಪ್ರಸ್ತಾವನೆ ಇದೆ. ಈ ಹಿನ್ನೆಲೆಯಲ್ಲಿ ಯಾವೆಲ್ಲ ಯೋಜನೆಗಳನ್ನು ಕಾರ್ಯರೂಪಕ್ಕೆ ತರಬಹುದು ಎಂಬ ಬಗ್ಗೆ ಚಿಂತನೆ ನಡೆಯುತ್ತಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಉಲ್ಲಾಸ್ ಕಾಮತ್ ನೇತೃತ್ವದಲ್ಲಿ ರಚನೆ ಮಾಡಲಾದ ಟಾಸ್ಕ್ಫೋರ್ಸ್ನ ವರದಿಯನ್ನು ತರಿಸಿಕೊಂಡು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಕೈಗಾರಿಕಾ ಅಭಿವೃದ್ಧಿ ನಡೆಸಲು ಪೂರಕವಾಗಿ ಚಿಂತನೆ ನಡೆಯುತ್ತಿದೆ. ಉಡುಪಿಯ ಮೂಳೂರಿನಲ್ಲಿ 250 ಎಕರೆ, ದ.ಕ. ದ ಬಳ್ಕುಂಜೆ ಎಂಬಲ್ಲಿ 800 ಎಕರೆ ಪ್ರದೇಶಗಳು ಸೇರಿದಂತೆ, ವಿವಿಧ ಭಾಗಗಳಲ್ಲಿ ಸುಮಾರು 1,050 ಎಕರೆ ಜಮೀನು ವಶಪಡಿಸಿಕೊಂಡು, ಅಲ್ಲಿ ಕೈಗಾರಿಕೆಗಳನ್ನು ಆರಂಭಿಸುವ ಬಗ್ಗೆ ನಿರ್ಣಯ ಕೈಗೊಳ್ಳಲಾಗುತ್ತಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಸ್ಥಳೀಯ ಗ್ರಾಮ ಪಂಚಾಯತ್ಗಳಿಗೆ ಆಯಾ ಕೈಗಾರಿಕಾ ಘಟಕಗಳಿಂದ ತೆರಿಗೆ ಬಾಕಿ ಇದೆ. ಈ ಸಮಸ್ಯೆ ಪರಿಹಾರಕ್ಕೆ ಶೀಘ್ರದಲ್ಲೇ ಏಕರೂಪದ ಪರಿಹಾರ ಕೈಗೊಳ್ಳಲು ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳುವುದಾಗಿ ಹೇಳಿದ್ದಾರೆ. ಹಾಗೆಯೇ ಬೃಹತ್ ಉದ್ಯಮಗಳಲ್ಲಿ ಸ್ಥಳೀಯರಿಗೆ ಉದ್ಯೋಗಾವಕಾಶ ಒದಗಿಸಲು ಸರ್ಕಾರ ಬದ್ಧವಾಗಿರುವುದಾಗಿಯೂ ಅವರು ಇದೇ ಸಂದರ್ಭದಲ್ಲಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.