ನವದೆಹಲಿ: ಬಹುನಿರೀಕ್ಷಿತ ಪ್ರಧಾನಿ ಮೋದಿ ಸರ್ಕಾರದ ಸಂಪುಟ ಪುನರ್ರಚನೆ ಇಂದು ನಡೆಯಲಿದ್ದು, 43 ಸದಸ್ಯರು ಸಂಪುಟಕ್ಕೆ ಸೇರ್ಪಡೆಗೊಳ್ಳಲಿದ್ದಾರೆ. ಕರ್ನಾಟಕದಿಂದ ಮೋದಿ ಸಂಪುಟದಲ್ಲಿ 4 ಮಂದಿ ಸ್ಥಾನ ಪಡೆದಿದ್ದಾರೆ.
ಈ ಹಿನ್ನೆಲೆಯಲ್ಲಿ ಇಂದು ಸಂಪುಟಕ್ಕೆ ಸೇರ್ಪಡೆಯಾಗಲಿರುವ 43 ಸಂಸದರು//ಸದಸ್ಯರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಸಭೆ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಸಂಪುಟಕ್ಕೆ ನೂತನವಾಗಿ ಸೇರ್ಪಡೆಯಾಗಲಿರುವ ಸದಸ್ಯರ ಜೊತೆಗೆ ಪ್ರಧಾನಿ ಮೋದಿ ಅವರು ಇಂದು ಮಧ್ಯಾಹ್ನ ವೈಯಕ್ತಿಕವಾಗಿ ಮಾತುಕತೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಗೃಹ ಸಚಿವ ಅಮಿತ್ ಶಾ, ರಾಷ್ಟ್ರೀಯ ಅಧ್ಯಕ್ಷ ಜೆ. ಪಿ. ನಡ್ಡಾ, ಸಚಿವ ನಿತಿನ್ ಗಡ್ಕರಿ, ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ. ಎಲ್. ಸಂತೋಷ್ ಉಪಸ್ಥಿತರಿದ್ದರು.
ಇಂದು ನಡೆಯುವ ಸಚಿವ ಸಂಪುಟದಲ್ಲಿ 43 ಸಚಿವರು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮೂಲಗಳು ತಿಳಿಸಿರುವಂತೆ 11 ಮಹಿಳಾ ಮಂತ್ರಿಗಳು (ಕ್ಯಾಬಿನೆಟ್), 27 ಒಬಿಸಿಗಳು, 8 ಎಸ್ಟಿ, 12 ಎಸ್ಸಿ ಸದಸ್ಯರು ಈ ಸಂಪುಟದ ಭಾಗವಾಗಲಿದ್ದಾರೆ. 13 ವಕೀಲರು, 6 ವೈದ್ಯರು, 5 ಎಂಜಿನಿಯರ್ಗಳು, 7 ಪೌರಕಾರ್ಮಿಕರು, 4 ಮಾಜಿ ಸಿಎಂಗಳು ಹೊಸ ಕೌನ್ಸಿಲ್ ಆಫ್ ಮಿನಿಸ್ಟರ್ಸ್ನ ಭಾಗವಾಗಲಿದ್ದಾರೆ. ಮುಸ್ಲಿಂ, ಸಿಖ್, ಕ್ರಿಶ್ಚಿಯನ್ ಸಮುದಾಯಗಳ ಪ್ರಾತಿನಿಧ್ಯವನ್ನು ಸಹ ಹೆಚ್ಚಿಸಲಾಗಿದೆ.
43 leaders to take oath today in the Union Cabinet expansion. Jyotiraditya Scindia, Pashupati Kumar Paras, Bhupender Yadav, Anupriya Patel, Shobha Karandlaje, Meenakshi Lekhi, Ajay Bhatt, Anurag Thakur to also take the oath. pic.twitter.com/pprtmDu4ko
— ANI (@ANI) July 7, 2021
ಕೇಂದ್ರ ಸಚಿವ ಸಂಪುಟ ವಿಸ್ತರಣೆಗೂ ಮುನ್ನ ಈವರೆಗೆ ಸಂಪುಟದಲ್ಲಿ ಸ್ಥಾನ ಪಡೆದಿದ್ದ ಹಲವು ಸಚಿವರು ಕೇಂದ್ರ ಸರ್ಕಾರಕ್ಕೆ ರಾಜೀನಾಮೆ ನೀಡಿದ್ದಾರೆ.
ಇಂದು ಕೇಂದ್ರ ಆರೋಗ್ಯ ಸಚಿವರಾಗಿದ್ದ ಡಾ. ಹರ್ಷವರ್ಧನ್, ಕೇಂದ್ರ ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್, ಕಾರ್ಮಿಕ ಸಚಿವ ಸಂತೋಷ್, ಕೇಂದ್ರ ಸಚಿವ ಸದಾನಂದ ಗೌಡ, ಮೊ. ಎಸ್. ಸಂಜಯ್ ಧೋತ್ರೆ, ದೇಬಸ್ರೀ ಚೌಧರಿ, ರಾವ್ ಸಾಹಿಬ್ ದನ್ವೆ ಪಾಟೀಲ್, ಥಾವರ್ ಚಂದ್ ಗೆಹ್ಲೋಟ್, ರತನ್ ಲಾಲ್ ಕಠಾರಿಯಾ, ಪ್ರತಾಪ್ ಸಾರಂಗಿ, ಬಾಬುಲ್ ಸುಪ್ರಿಯೋ, ಅಶ್ವಿನಿ ಕುಮಾರ್ ಚೌಬೆ ಮೊದಲಾದವರು ಸಂಪುಟ ಪುನರಚನೆಗೂ ಮುನ್ನ ರಾಜೀನಾಮೆ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.