ನವದೆಹಲಿ: ಕೊರೋನಾ ಸಂಕಷ್ಟ ಇನ್ನೂ ಜೀವಂತವಾಗಿದೆ. ಆದರೆ ಜನಸಂದಣಿ ಪ್ರದೇಶಗಳಲ್ಲಿ ಜನತೆ ಯಾವುದೇ ಮಾರ್ಗಸೂಚಿಗಳನ್ನು ಪಾಲಿಸದಿರುವುದಕ್ಕೆ ಕಳವಳ ವ್ಯಕ್ತಪಡಿಸಿರುವ ಪ್ರಧಾನಿ ಮೋದಿ, ಅಜಾಗರೂಕತೆಗೆ ಅವಕಾಶ ಇಲ್ಲ ಎಂದು ಎಚ್ಚರಿಸಿದ್ದಾರೆ.
ಸಂಪುಟ ಪುನರಚನೆಯ ಬಳಿಕ ಸಚಿವರ ಜೊತೆಗೆ ಅವರು ಸಭೆ ನಡೆಸಿದ್ದು, ನಾವು ಮಾಡುವ ಒಂದು ತಪ್ಪು ದೊಡ್ಡ ದುಷ್ಪರಿಣಾಮ ಉಂಟುಮಾಡುವ ಸಾಧ್ಯತೆ ಇದೆ. ಸಾಂಕ್ರಾಮಿಕ ರೋಗಗಳ ವಿರುದ್ಧದ ಹೋರಾಟವನ್ನು ದುರ್ಬಲಗೊಳಿಸುವುದು ಸರಿಯಲ್ಲ. ಇದು ನಮ್ಮಲ್ಲಿ ಪ್ರಜ್ಞೆ ಮೂಡಿಸಬೇಕಾದ ಸಮಯ ಎಂದು ತಿಳಿಸಿದರು. ಕೊರೋನಾ ಮಾರ್ಗಸೂಚಿಗಳನ್ನು ಅನುಸರಿಸದೆ ಜನರು ಗುಂಪುಗೂಡುವುದು, ಪ್ರವಾಸಿ ತಾಣಗಳಿಗೆ ಭೇಟಿ ನೀಡುವುದು ಮೊದಲಾದವುಗಳನ್ನು ಮಾಡಬಾರದು ಎಂದು ಅವರು ಹೇಳಿದರು.
ಕೊರೋನಾ ಸಾಂಕ್ರಾಮಿಕ ಸಂಕಷ್ಟದ ವಿರುದ್ಧ ಭಾರತ ಚೈತನ್ಯದಿಂದ ಹೋರಾಡುತ್ತಿದೆ. ವ್ಯಾಕ್ಸಿನೇಶನ್ ಕಾರ್ಯಕ್ರಮ ಸ್ಥಿರವಾಗಿ ನಡೆಯುತ್ತಿದೆ. ಕೊರೋನಾ ಪರೀಕ್ಷೆ ನಡೆಸುವ ಸಂಖ್ಯೆಯನ್ನು ಹೆಚ್ಚಿಸಲಾಗಿದೆ. ಇಂತಹ ಸಂದರ್ಭದಲ್ಲಿ ಬೇಕಾಬಿಟ್ಟಿ ವರ್ತನೆ ಸರಿಯಲ್ಲ. ಕೆಲ ರಾಷ್ಟ್ರಗಳಲ್ಲಿ ಕೊರೋನಾ ರೂಪಾಂತರ ಕಂಡುಬಂದಿದ್ದು, ಈ ನಿಟ್ಟಿನಲ್ಲಿ ಎಚ್ಚರ ಅಗತ್ಯ ಎಂದು ಮೋದಿ ತಿಳಿಸಿದರು.
ಕೊರೋನಾ ಸಂಬಂಧಿಸಿದಂತೆ ಜನರಲ್ಲಿ ಭಯ ಹುಟ್ಟಿಸಬಾರದು. ಬದಲಾಗಿ ಈ ನಿಟ್ಟಿನಲ್ಲಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ಪಾಲಿಸುವಂತೆ ಜನರಲ್ಲಿ ವಿನಂತಿಸಬೇಕು. ಅರಿವು ಮೂಡಿಸಬೇಕು. ಹೀಗಾದಲ್ಲಿ ಮಾತ್ರ ದೇಶ ಈ ಸಾಂಕ್ರಾಮಿಕ ರೋಗದಿಂದ ಮುಕ್ತವಾಗಲು ಸಾಧ್ಯ ಎಂದು ಹೇಳಿದ್ದಾರೆ. ಮಹಾರಾಷ್ಟ್ರ ಮತ್ತು ಕೇರಳಗಳಲ್ಲಿ ಸೋಂಕು ಹೆಚ್ಚುತ್ತಿರುವ ಬಗ್ಗೆ ಅವರು ಕಳವಳವನ್ನು ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.