ಲಕ್ನೋ: ಪ್ರಸ್ತಾವಿತ ಜನಸಂಖ್ಯಾ ನಿಯಂತ್ರಣ ಕಾಯ್ದೆಗೆ ಪೂರಕವಾಗುವಂತೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಸರ್ಕಾರ ಹೆಜ್ಜೆ ಮುಂದಿರಿಸಿದೆ.
ಇದರನ್ವಯ ಟು ಚೈಲ್ಡ್ ಪಾಲಿಸಿ (ಎರಡು ಮಕ್ಕಳ ನೀತಿ) ಯನ್ನು ಉಲ್ಲಂಘನೆ ಮಾಡುವವರಿಗೆ ಯಾವುದೇ ಸರ್ಕಾರದ ಯೋಜನೆಯನ್ನು ನೀಡಲಾಗುವುದಿಲ್ಲ. ಜೊತೆಗೆ ಸರ್ಕಾರಿ ಉದ್ಯೋಗಗಳಲ್ಲಿಯೂ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ ಕುಟುಂಬಗಳಿಗೆ ಅರ್ಜಿ ಸಲ್ಲಿಕೆಗೆ ಅವಕಾಶ ಇಲ್ಲ ಎಂದು ತಿಳಿಸಿರುವುದಾಗಿ ಟೈಮ್ ಆಫ್ ಇಂಡಿಯಾ ವರದಿ ಮಾಡಿದೆ.
ಹಾಗೆಯೇ ಕರಡು ಮಸೂದೆಯಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿಯೂ ಎರಡಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದವರಿಗೆ ಸ್ಪರ್ಧಿಸಲು ಅವಕಾಶ ಇಲ್ಲ ಎಂದು ಯುಪಿ ಸರ್ಕಾರ ಹೇಳಿದೆ.
ಹಾಗೆಯೇ ಎರಡು ಮಕ್ಕಳ ನೀತಿಯನ್ನು ಅನುಸರಿಸುವವರಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೆಲವೊಂದು ಅನುಕೂಲಗಳನ್ನು ಒದಗಿಸಲು ಸರ್ಕಾರ ನಿರ್ಧರಿಸಿದೆ. ಸಬ್ಸಿಡಿಯಲ್ಲಿ ಮನೆ ಹೊಂದಲು ಅವಕಾಶ, ಉಪಯುಕ್ತ ಶುಲ್ಕಗಳ ಮೇಲೆ ರಿಯಾಯಿತಿ, ರಾಷ್ಟ್ರೀಯ ಪಿಂಚಣಿ ಯೋಜನೆ, ನೌಕರರ ಭವಿಷ್ಯ ನಿಧಿಯಲ್ಲಿ 3% ಹೆಚ್ಚಳ ಒದಗಿಸುವುದಕ್ಕೆ ಕ್ರಮ ಕೈಗೊಳ್ಳಲಿದೆ. ಕೇವಲ ಒಂದು ಮಗುವನ್ನು ಪಡೆಯುವ ದಂಪತಿಗೆ ಮತ್ತಷ್ಟು ಪ್ರಯೋಜನಕಾರಿ ಯೋಜನೆಗಳನ್ನು ಜಾರಿಗೊಳಿಸಲು ಸರ್ಕಾರ ಚಿಂತನೆ ನಡೆಸಿದೆ.
ಎರಡು ಮಕ್ಕಳ ನೀತಿ ಕಾನೂನಿನ ವಿವಿಧ ನಿಬಂಧನೆಗಳ ಪಟ್ಟಿ ಇರುವ ಕರಡು ಮಸೂದೆಯನ್ನು ರಾಜ್ಯ ಕಾನೂನು ಆಯೋಗದ ವೆಬ್ಸೈಟ್ನಲ್ಲಿ ಅಪ್ಲೋಡ್ ಮಾಡಲಾಗಿದೆ. ಜೊತೆಗೆ ಸಾರ್ವಜನಿಕರ ಸಲಹೆಗಳನ್ನು ಪಡೆಯುತ್ತಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.