ಬೆಂಗಳೂರು: ಕನ್ನಡ ಭಾಷೆಯ ಬಳಕೆ ಹೆಚ್ಚಿಸುವುದು, ಕನ್ನಡವನ್ನು ಉತ್ತೇಜಿಸುವ ಸಲುವಾಗಿ ಮದರಸಾಗಳು, ಚರ್ಚ್ಗಳಲ್ಲಿ ಕನ್ನಡ ತರಗತಿಗಳನ್ನು ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಸರ್ಕಾರ ಯೋಜನೆ ರೂಪಿಸುತ್ತಿದೆ.
ಸರ್ಕಾರಿ ಮತ್ತು ಸಾರ್ವಜನಿಕ ಸ್ಥಳಗಳಲ್ಲಿ ಕನ್ನಡಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಯೋಜನೆಗೆ ಮುಂದಾಗಿದೆ. ‘ಕನ್ನಡ ಕಾಯಕ ವರ್ಷ’ ದ ಹಿನ್ನೆಲೆಯಲ್ಲಿ ಇಂತಹ ಒಂದು ಮಹತ್ವದ ನಿರ್ಧಾರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರ ಮಾಡಿದೆ.
ಈ ಸಂಬಂಧ ಪ್ರಾಧಿಕಾರದ ಅಧ್ಯಕ್ಷ ಟಿ. ಎಸ್. ನಾಗಾಭರಣ ಮಾತನಾಡಿದ್ದು, ಕನ್ನಡ ತರಗತಿಗಳನ್ನು ಮದರಸಾ, ಚರ್ಚ್ಗಳಲ್ಲಿ ಆರಂಭಿಸುವುದಕ್ಕೆ ಸಂಬಂಧಿಸಿದಂತೆ ಮಧ್ಯಸ್ಥಿಕೆ ವಹಿಸುವವರ ಜೊತೆಗೆ ಪ್ರಾಥಮಿಕ ಮಟ್ಟದ ಸಭೆ ನಡೆಸಲಾಗಿದೆ ಎಂದು ಹೇಳಿದ್ದಾರೆ. ಹಾಗೆಯೇ ಇದನ್ನು ಯಾವ ರೀತಿಯಲ್ಲಿ ಅಳವಡಿಕೆ ಮಾಡಬಹುದು ಎಂಬುದಕ್ಕೆ ಸಂಬಂಧಿಸಿದಂತೆ ಸ್ವರೂಪಗಳನ್ನು ತಿಳಿಸಲು ಮತ್ತೊಂದು ಸುತ್ತಿನ ಸಭೆ ನಡೆಸಲಾಗುವುದು ಎಂದು ಹೇಳಿದ್ದಾರೆ. ಹಾಗೆಯೇ ಪ್ರಾರ್ಥನೆಗಳನ್ನು ಸಹ ಕನ್ನಡದಲ್ಲೇ ನಡೆಸುವಂತೆ ಸೂಚಿಸಲಾಗುವುದು ಎಂದು ಅವರು ನುಡಿದಿದ್ದಾರೆ.
ಜನರು ಕನ್ನಡಕ್ಕೆ ಹೆಚ್ಚು ಪ್ರಾಶಸ್ತ್ಯ ನೀಡುವಂತಾಗಬೇಕು. ಕನ್ನಡ ಬೆಳೆಯಬೇಕು ಎಂಬ ಉದ್ದೇಶದಿಂದ ಇಂತಹ ಒಂದು ಯೋಜನೆಗೆ ಮನಸ್ಸು ಮಾಡಲಾಗಿದೆ ಎಂದು ಅವರು ಹೇಳಿದ್ದಾರೆ. ಸರ್ಕಾರದ ಅನುಮೋದನೆ ಬಳಿಕ ಈ ಯೋಜನೆ ಅನುಷ್ಠಾನವಾಗಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.