ಬೆಂಗಳೂರು: ಕರ್ನಾಟಕ ಪೊಲೀಸ್ ಕಲ್ಯಾಣ ನಿಧಿ, ವಿದ್ಯಾನಿಧಿ ಯೋಜನೆ ಹಾಗೂ ಆರೋಗ್ಯ ಭಾಗ್ಯ ಯೋಜನೆಗಳಿಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಾಲನೆ ನೀಡಿದರು.
206 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿ ಆದೇಶವನ್ನು ರಾಜ್ಯ ಪೊಲೀಸ್ ಇಲಾಖೆಗೆ ನೇಮಿಸುವ ಆದೇಶವನ್ನು ರಾಜ್ಯ ಪೊಲೀಸ್ ಮಹಾನಿರ್ದೇಶಕ ಪ್ರವೀಣ್ ಸೂದ್ ಅವರಿಗೆ ಹಸ್ತಾಂತರ ಮಾಡಲಾಯಿತು.
ರಾಜ್ಯದ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು, ಗೃಹರಕ್ಷಕ ದಳ, ಪೌರ ರಕ್ಷಣೆ, ರಾಜ್ಯದ ವಿಪತ್ತು ಸ್ಪಂದನಾ ಪಡೆಯ 236 ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಚಿನ್ನದ ಪದಕ ಪ್ರದಾನಿಸಿದರು.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ನಲ್ಲಿ ನಡೆದ ಸಮಾರಂಭದಲ್ಲಿ ಸಿಎಂ ಅವರು ಪದಕ ಪ್ರದಾನಿಸಿ ಗೌರವಿಸಿದರು. 2015 -20 ರ ನಡುವಿನ ಅವಧಿಯಲ್ಲಿ ಗಣನೀಯ ಸೇವೆ ಸಲ್ಲಿಸಿದ , ತುರ್ತು ಸಂದರ್ಭಗಳಲ್ಲಿ ಜೀವವನ್ನೇ ಒತ್ತೆಯಿಟ್ಟು ಕಾರ್ಯ ನಿರ್ವಹಿಸಿದವರಿಗೆ ಪದಕ ಪ್ರದಾನಿಸಲಾಯಿತು.
ಕಾರ್ಯಕ್ರಮದಲ್ಲಿ ಗೃಹಸಚಿವ ಬಸವರಾಜ ಬೊಮ್ಮಾಯಿ, ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಜನೀಶ್ ಗೋಯಲ್, ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್, ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಪೊಲೀಸ್ ಮಹಾನಿರ್ದೇಶಕ ಅಮರ್ ಕುಮಾರ್ ಪಾಂಡೆ ಉಪಸ್ಥಿತರಿದ್ದರು.
ಮುಖ್ಯಮಂತ್ರಿ @BSYBJP ರವರು ಇಂದು ಕರ್ನಾಟಕ ಪೊಲೀಸ್ ಕಲ್ಯಾಣ ನಿಧಿ, ವಿದ್ಯಾನಿಧಿ ಯೋಜನೆ ಹಾಗೂ ಆರೋಗ್ಯ ಭಾಗ್ಯ ಯೋಜನೆಗಳಿಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಒಟ್ಟು 206 ವೈಜ್ಞಾನಿಕ ಅಧಿಕಾರಿಗಳ ನೇಮಕಾತಿ ಆದೇಶವನ್ನು ಮುಖ್ಯಮಂತ್ರಿಗಳು ರಾಜ್ಯ ಪೊಲೀಸ್ ಮಹಾನಿರ್ದೇಶಕ @Copsview ರವರಿಗೆ ಹಸ್ತಾಂತರಿಸಿದರು. (1/2) pic.twitter.com/atulxu2wE7
— CM of Karnataka (@CMofKarnataka) July 13, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.