ನವದೆಹಲಿ: ಈಶಾನ್ಯದ ಎಂಟು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಕೊರೋನಾ ಸಂಬಂಧಿಸಿದಂತೆ ಪ್ರಧಾನಿ ಮೋದಿ ಅವರು ಇಂದು ವಿಡಿಯೋ ಕಾನ್ಫರೆನ್ಸ್ ಮುಖೇನ ಸಭೆ ನಡೆಸಿದ್ದಾರೆ.
ಅರುಣಾಚಲ ಪ್ರದೇಶ, ಅಸ್ಸಾಂ, ಮೇಘಾಲಯ, ಮಣಿಪುರ, ಮಿಜೋರಾಂ, ನಾಗಾಲ್ಯಾಂಡ್, ತ್ರಿಪುರ, ಸಿಕ್ಕಿಂ ಮುಖ್ಯಮಂತ್ರಿಗಳ ಜೊತೆಗೆ ಆಯಾಯ ರಾಜ್ಯದ ಕೊರೋನಾ ಸ್ಥಿತಿಗತಿಗಳ ಕುರಿತು ಅವಲೋಕನ ನಡೆಸಿದ್ದಾರೆ.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಕೊರೋನಾ ಸಂದರ್ಭದಲ್ಲಿ ಜನರು ಮಾಸ್ಕ್ಗಳನ್ನು ಧರಿಸದೆ, ಸಾಮಾಜಿಕ ಅಂತರ ಮರೆತು ಗುಂಪುಗೂಡುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಕಳವಳ ವ್ಯಕ್ತಪಡಿಸಿದ್ದು, ಸೋಂಕು ಪತ್ತೆ ಪರೀಕ್ಷೆ ಹೆಚ್ಚಿಸಲು ಸೂಚನೆ ನೀಡಿದ್ದಾರೆ.
ಕೆಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿತರ ಪ್ರಮಾಣ ಏರಿಕೆಯಾಗುತ್ತಿರುವುದು ಕಳವಳಕಾರಿಯಾಗಿದೆ. ಈ ಹಿನ್ನೆಲೆಯಲ್ಲಿ ಕೊರೋನಾ ಸೋಂಕು ಮತ್ತಷ್ಟು ವ್ಯಾಪಿಸದಂತೆ ಎಚ್ಚರಿಕೆ ತೆಗೆದುಕೊಳ್ಳುವ ಅಗತ್ಯತೆ ಹೆಚ್ಚಾಗಿದೆ ಎಂದು ಹೇಳಿದ್ದಾರೆ. ಕೊರೋನಾ ಕಾರಣದಿಂದ ಪ್ರವಾಸೋದ್ಯಮ, ವ್ಯವಹಾರಗಳು ನೆಲಮುಖವಾಗಿವೆ. ಆದರೆ ಇಂತಹ ಆತಂಕಕಾರಿ ಸಂದರ್ಭದಲ್ಲಿಯೂ ಜನತೆ ಎಚ್ಚರಿಕಾ ಕ್ರಮಗಳನ್ನು ನಿರ್ಲಕ್ಷ್ಯ ಮಾಡಿ ಗುಂಪುಗೂಡುವುದು, ಮಾಸ್ಕ್ ಧರಿಸದೆಯೇ ಓಡಾಟ ನಡೆಸುವುದು ಕಂಡುಬರುತ್ತಿದೆ. ಇದನ್ನು ನಿಯಂತ್ರಣ ಮಾಡುವ ಅಗತ್ಯ ಇದೆ ಎಂದು ಹೇಳಿದ್ದಾರೆ.
ಈ ನಿಟ್ಟಿನಲ್ಲಿ ವೈರಸ್ ಸೂಕ್ಷ್ಮ ಪ್ರಮಾಣದ ಮಟ್ಟದಲ್ಲಿ ಇರುವಾಗಲೇ ಕ್ಷಿಪ್ರವಾಗಿ ಹರಡದಂತೆ ಕಠಿಣ ನಿಯಮಗಳನ್ನು ಅನುಸರಿಸುವ ಅಗತ್ಯವಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.