ನವದೆಹಲಿ: ಟೋಕಿಯೋ ಒಲಿಂಪಿಕ್ಸ್ನಲ್ಲಿ ಸ್ಪರ್ಧಿಸಲು ತೆರಳಲಿರುವ ಭಾರತೀಯ ಕ್ರೀಡಾಪಟುಗಳ ಜೊತಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಪ್ರಧಾನಿ ಮೋದಿ ಅವರು ಸಂವಾದ ನಡೆಸಿದರು.
ಪ್ಯಾರಿಸ್ನಲ್ಲಿ ಚಿನ್ನದ ಪದಕ ಪಡೆದ ದೀಪಿಕಾ ಕುಮಾರಿ ಅವರನ್ನು ಅಭಿನಂದಿಸುವ ಮೂಲಕ ಪ್ರಧಾನಿ ಮೋದಿ ಈ ಸಂವಾದವನ್ನು ಆರಂಭಿಸಿದರು.
ಈ ಬಾರಿ ಭಾರತದಿಂದ 18 ಕ್ರೀಡೆಗಳಲ್ಲಿ ಭಾಗವಹಿಸುವುದಕ್ಕೆ ಸಂಬಂಧಿಸಿದಂತೆ 126 ಕ್ರೀಡಾಪಟುಗಳು ಟೊಕಿಯೋಗೆ ತೆರಳಲಿದ್ದಾರೆ ಎಂದು ಪಿಎಂಒ ಮಾಹಿತಿ ನೀಡಿದೆ. ಈ ಬಾರಿ ಒಲಿಂಪಿಕ್ಸ್ನಲ್ಲಿ ಭಾರತದಿಂದ ಅತೀ ಹೆಚ್ಚು ಕ್ರೀಡಾಪಟುಗಳು ಭಾಗವಹಿಸುತ್ತಿದ್ದು, ಈ ಹಿನ್ನೆಲೆಯಲ್ಲಿ ಅವರು ಮಾಡಿಕೊಳ್ಳುತ್ತಿರುವ ಸಿದ್ಧತೆಗಳ ಬಗೆಗೂ ಪ್ರಧಾನಿ ಮೋದಿ ಅವರು ಕ್ರೀಡಾಪಟುಗಳ ಜೊತೆಗೆ ಚರ್ಚಿಸಿದ್ದಾರೆ. ಹಾಗೆಯೇ ಟೊಕಿಯೋಗೆ ತೆರಳುವ ಕ್ರೀಡಾಳುಗಳಿಗೆ ಎಲ್ಲಾ ರೀತಿಯ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವುದಾಗಿಯೂ ಅವರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.
ಈ ಹಿಂದೆ ಪ್ರಧಾನಿ ಮೋದಿ ಅವರ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿಯೂ ಕ್ರೀಡಾಪಟುಗಳು ಮತ್ತು ಕ್ರೀಡೆಗಳಿಗೆ ಉತ್ತೇಜನ ದೊರೆಯುವಂತೆ ಸ್ಫೂರ್ತಿದಾಯಕ ಮಾತುಗಳನ್ನಾಡಿದ್ದರು. ಅದಕ್ಕೆ ಪೂರಕ ಎಂಬಂತೆ ಈ ಬಾರಿ ಹೆಚ್ಚು ಆಟಗಾರರು ಒಲಿಂಪಿಕ್ಸ್ಗೆ ತೆರಳುತ್ತಿದ್ದು, ಅವರಿಗೆ ಪೂರ್ಣ ಹೃದಯದಿಂದ ಬೆಂಬಲ ನೀಡುವಂತೆಯೂ ಪ್ರಧಾನಿ ಮೋದಿ ಮನವಿ ಮಾಡಿದ್ದಾರೆ.
ಈ ಬಾರಿ ಸಜನ್ ಪ್ರಕಾಶ್, ಶ್ರೀಹರಿ ನಟರಾಜನ್, ನೇತ್ರ ಕುಮನನ್, ಪಿವಿ ಸಿಂಧು, ನೀರಜ್ ಛೋಪ್ರಾ, ಸೌರಭ್ ಚೌಧರಿ, ವಿನಿಶಾ ಪೋಗಟ್ ಸೇರಿದಂತೆ ಒಟ್ಟು 126 ಕ್ರೀಡಾಪಟುಗಳು ಟೊಕಿಯೋಗೆ ತೆರಳಲಿದ್ದಾರೆ. ಜುಲೈ 17 ರಂದು ಮೊದಲ ಬ್ಯಾಚ್ ಟೊಕಿಯೋಗೆ ತೆರಳಲಿದೆ. ಜುಲೈ 23 ರಿಂದ ಒಲಿಂಪಿಕ್ಸ್ ಆರಂಭವಾಗಲಿದೆ.
ಈ ಸಂವಾದದಲ್ಲಿ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮತ್ತು ಕಿರಣ್ ರಿಜಿಜು ಅವರೂ ಭಾಗವಹಿಸಿ, ಕ್ರೀಡಾಪಟುಗಳಿಗೆ ಶುಭ ಹಾರೈಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.