ನವದೆಹಲಿ: ಮಾರುಕಟ್ಟೆ, ಪ್ರವಾಸಿ ತಾಣಗಳು, ಗಿರಿಧಾಮಗಳು ಸೇರಿದಂತೆ ಹಲವೆಡೆ ಕೊರೋನಾ ಮುಂಜಾಗ್ರತಾ ಕ್ರಮಗಳ ಉಲ್ಲಂಘನೆ ಕಂಡುಬರುತ್ತಿದ್ದು, ಈ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಗೃಹ ಸಚಿವಾಲಯವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಸೂಚಿಸಿದೆ.
ಈ ಸಂಬಂಧ ಪತ್ರ ಬರೆದಿರುವ ಕೇಂದ್ರ ಗೃಹ ಕಾರ್ಯದರ್ಶಿ ಅಜಯ್ ಭಲ್ಲಾ, ಸಾರ್ವಜನಿಕ ಸಾರಿಗೆ ವ್ಯವಸ್ಥೆಯಲ್ಲಿಯೂ ಕೊರೋನಾ ನಿಯಮಗಳನ್ನು ಪಾಲಿಸಲಾಗುತ್ತಿಲ್ಲ. ಗಿರಿಧಾಮ, ಮಾರುಕಟ್ಟೆಗಳಲ್ಲಿ ಜನರು ಭಾರೀ ಪ್ರಮಾಣದಲ್ಲಿ ಗುಂಪು ಸೇರುತ್ತಿದ್ದಾರೆ. ಸಾಮಾಜಿಕ ಅಂತರ ಕಾಪಾಡಿಕೊಳ್ಳುತ್ತಿಲ್ಲ. ಈ ಸಂಬಂಧ ಎಚ್ಚರಿಕೆ ವಹಿಸಬೇಕಾಗಿದೆ ಎಂದು ತಿಳಿಸಿದ್ದಾರೆ.
ಕೊರೋನಾ ಎರಡನೇ ಅಲೆಯಿಂದ ನಾವಿನ್ನೂ ಮುಕ್ತರಾಗಿಲ್ಲ. ಕೊರೋನಾ ಸಕ್ರಿಯ ಪ್ರಕರಣಗಳ ಪ್ರಮಾಣದಲ್ಲಿ ಇಳಿಕೆ ಕಂಡಿದ್ದರಿಂದ ಆರ್ಥಿಕ ಚಟುವಟಿಕೆ ಪುನರಾರಂಭಿಸಲಾಗಿದೆ. ಆದರೆ ಕೊರೋನಾ ನಿಯಮ ಸಡಿಲಿಕೆ ಸಂದರ್ಭದಲ್ಲಿ ಎಚ್ಚರಿಕೆ ಅಗತ್ಯ. ಈ ಹಿನ್ನೆಲೆಯಲ್ಲಿ ಕೊರೋನಾ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಭಲ್ಲಾ ನಿರ್ದೇಶನ ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.