ಬೆಂಗಳೂರು: ಕರ್ನಾಟಕದಲ್ಲಿ ಕೌಶಲಪೂರ್ಣ ಮಾನವ ಸಂಪನ್ಮೂಲವನ್ನು ಎಲ್ಲಾ ಔದ್ಯೋಗಿಕ ವಲಯಗಳಿಗೆ ಒದಗಿಸಿಕೊಡುವ ಉದ್ದೇಶದಿಂದ 150 ಸರ್ಕಾರಿ ಐಟಿಐ ಸಂಸ್ಥೆಗಳನ್ನು 5 ಸಾವಿರ ಕೋಟಿ ರೂ. ಗಳಲ್ಲಿ ಮೇಲ್ದರ್ಜೆಗೇರಿಸಲು ‘ಉದ್ಯೋಗ’ ಎಂಬ ವಿನೂತನ ಕಾರ್ಯಕ್ರಮವನ್ನು ಜಾರಿಗೆ ತರಲಾಗಿರುವುದಾಗಿ ಡಿಸಿಎಂ ಡಾ. ಅಶ್ವತ್ಥ್ ನಾರಾಯಣ ಅವರು ತಿಳಿಸಿದ್ದಾರೆ.
ಸರ್ಕಾರಿ ಐಟಿಐ ಗಳ ಉನ್ನತೀಕರಣ ಉದ್ದೇಶಕ್ಕಾಗಿ ಟಾಟಾ ಟೆಕ್ನಾಲಜಿಯನ್ನು ಒಳಗೊಂಡಂತೆ ಇಪ್ಪತ್ತು ಖಾಸಗಿ ಕಂಪೆನಿಗಳ ಜೊತೆಗೆ ರಾಜ್ಯ ಸರ್ಕಾರ ಒಪ್ಪಂದ ಮಾಡಿಕೊಂಡಿದೆ. 250 ಕೋಟಿ ರೂ. ವೆಚ್ಚದಲ್ಲಿ ಸುಸಜ್ಜಿತ ಕಟ್ಟಡ, ಎಲ್ಲಾ ರೀತಿಯ ಮೂಲಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ.
ಹಾಗೆಯೇ ಪಠ್ಯ ಕ್ರಮಗಳಲ್ಲಿ ಪ್ರಸಕ್ತ ಅಗತ್ಯತೆಗಳಿಗೆ ಅನುಗುಣವಾಗಿ ಹೊಸ ಪಠ್ಯ ರೂಪಿಸಲಾಗುತ್ತದೆ. ಉತ್ತಮ ತರಬೇತಿ, ನೇರ ಉದ್ಯೋಗಕ್ಕೆ ವಿದ್ಯಾರ್ಥಿಗಳನ್ನು ಅಣಿಗೊಳಿಸುವುದು ಇದರ ಮುಖ್ಯ ಉದ್ದೇಶ ಎಂದು ಅವರು ಹೇಳಿದ್ದಾರೆ. ಐಟಿಐಗಳಲ್ಲಿ 150 ಹೊಸ ಲ್ಯಾಬ್ಗಳ ಸ್ಥಾಪನೆ, 75 ಹಳೆಯ ಲ್ಯಾಬ್ಗಳ ಉನ್ನತೀಕರಣ ಮಾಡುವುದು ಇದರ ಉದ್ದೇಶ ಎಂದು ಅವರು ತಿಳಿಸಿದ್ದಾರೆ.
ಜೊತೆಗೆ ಕೌಶಲ ಕಲಿಕೆಗೆ ಆನ್ಲೈನ್ ಸ್ಪರ್ಶ ನೀಡಲಾಗುತ್ತದೆ. ಉದ್ಯೋಗ ಸೃಷ್ಟಿಗೂ ಅನೇಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ. ಹಾಗೆಯೇ ರಾಜ್ಯದಲ್ಲಿ ಮುಂದಿನ ಒಂದು ತಿಂಗಳ ಕಾಲ ಕೌಶಲ ಮಾಸ ಆಚರಿಸಲಾಗುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.