ಬೆಂಗಳೂರು: ರಾಜ್ಯದ ಸಚಿವರ ನಡೆ ಹಳ್ಳಿಯ ಕಡೆ ಎಂಬ ಕಾರ್ಯಕ್ರಮವನ್ನು ಮುಂದಿನ ದಿನಗಳಲ್ಲಿ ಅನುಷ್ಠಾನಕ್ಕೆ ತರಲಾಗುವುದು ಎಂದು ರಾಜ್ಯದ ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದರು.
ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನಕ್ಕೆ ಇಂದು ಭೇಟಿ ನೀಡಿದ ಅವರು ಪತ್ರಕರ್ತರೊಂದಿಗೆ ಮಾತನಾಡಿದರು.
ಸಚಿವರು ಪ್ರತಿ ಬುಧವಾರ ಮತ್ತು ಗುರುವಾರ ತಮಗೆ ನಿಗದಿ ಪಡಿಸಿದ ದಿನದಂದು ರಾಜ್ಯ ಕಾರ್ಯಾಲಯಕ್ಕೆ ಭೇಟಿ ನೀಡಿ, ಜನರ ಪರ ಕೆಲಸ ಮಾಡಬೇಕು. ಸಂಘಟನೆ ಮತ್ತು ಸೇವಾ ದೃಷ್ಟಿಯಿಂದ ಕೆಲಸ ಮಾಡಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಕೋರ್ ಕಮಿಟಿ ಸಭೆಯ ಸಂದರ್ಭದಲ್ಲಿ ಆದೇಶ ಮಾಡಿದ್ದಾರೆ. ಅದರಂತೆ ತಾವು ಇಂದು ಮಲ್ಲೇಶ್ವರದ ರಾಜ್ಯ ಬಿಜೆಪಿ ಕಾರ್ಯಾಲಯಕ್ಕೆ ಭೇಟಿ ನೀಡಿದ್ದಾಗಿ ವಿವರಿಸಿದರು.
ಛಲವಾದಿ ನಾರಾಯಣಸ್ವಾಮಿ, ನೆ.ಲ. ನರೇಂದ್ರ ಬಾಬು, ವಿಶ್ವನಾಥ್, ಕರುಣಾಕರ ಅವರೊಂದಿಗೆ ಚರ್ಚೆ ಮಾಡಿದ್ದೇನೆ. ಮುಂದಿನ ದಿನಗಳಲ್ಲಿ ಸರಕಾರವೇ ಹಳ್ಳಿಯಲ್ಲಿರುವ ಕಾರ್ಯಕರ್ತರ ಮನೆ ಬಾಗಿಲಿಗೆ ಹೋಗಿ ಸೇವೆ ಮಾಡುವ ಕುರಿತು ಚರ್ಚಿಸಲಾಗಿದೆ. ಮುಂದಿನ ದಿನಗಳಲ್ಲಿ ಜನರು ಸರಕಾರವನ್ನು ಹುಡುಕಿ ಬರಬಾರದು. ಸರಕಾರವೇ ಜನರ ಬಳಿಗೆ ಹೋಗುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು. ತಿಳಿಸಿದರು.
ರಾಜ್ಯದ ಸಚಿವ ಸಂಪುಟದ ಎಲ್ಲಾ ಸಚಿವರು ಇನ್ನು ಮುಂದೆ ನಿಗದಿಯಾದ ದಿನದಂದು ಇಲ್ಲಿಗೆ ಭೇಟಿ ಕೊಡಲಿದ್ದಾರೆ. ಸರಕಾರದ ಯೋಜನೆಗಳು ಜನರನ್ನು ತಲುಪುವ ನಿಟ್ಟಿನಲ್ಲಿ ಇದು ಸಹಕಾರಿಯಾಗಲಿದೆ. ಪಕ್ಷದ ಸಂಘಟನೆಗೂ ಇದರ ಪ್ರಯೋಜನ ಲಭಿಸಲಿದೆ ಎಂದರು.
ಒಲಿಂಪಿಕ್ಸ್ನಲ್ಲಿ ಭಾಗವಹಿಸುತ್ತಿರುವ ರಾಜ್ಯದ ಮತ್ತು ದೇಶದ ಎಲ್ಲಾ ಕ್ರೀಡಾಪಟುಗಳಿಗೆ ಶುಭ ಹಾರೈಸುವುದಾಗಿ ಅವರು ತಿಳಿಸಿದರು.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.