ನವದೆಹಲಿ: ಕೃತಕ ಬುದ್ಧಿಮತ್ತೆ ಆಧಾರಿತವಾದ, ಸಿಪಿಜಿಆರ್ಎಎಂಎಸ್ ಪಬ್ಲಿಕ್ ಗ್ರೀವೆನ್ಸ್ ಲೋಡಿಂಗ್ ಅಪ್ಲಿಕೇಶನ್ ಒಂದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚಾಲನೆ ನೀಡಿದ್ದಾರೆ.
ಈ ಅಪ್ಲಿಕೇಶನ್ ರಕ್ಷಣಾ ಸಚಿವಾಲಯದ ಅಧೀನ ಸಂಸ್ಥೆ ಡಿಆರ್ಡಿಒ ಮತ್ತು ಐಐಟಿ ಕಾನ್ಪುರಗಳ ಸಂಯೋಜನೆಯಿಂದ ಈ ಅಪ್ಲಿಕೇಶನ್ ಅನ್ನು ಅಭಿವೃದ್ಧಿ ಮಾಡಲಾಗಿದೆ.
ಈ ಸಂದರ್ಭದಲ್ಲಿ ಮಾತನಾಡಿದ ರಾಜನಾಥ್ ಸಿಂಗ್ ಅವರು, ಈ ಅಪ್ಲಿಕೇಶನ್ ದೇಶದ ವೈಜ್ಞಾನಿಕ ಮತ್ತು ತಂತ್ರಜ್ಞಾನದ ಜೊತೆಗೆ ನಾಗರಿಕ ಸುಧಾರಣೆಗಳಿಗೆ ದಾರಿ ಮಾಡಿಕೊಡುವ ನಿಟ್ಟಿನಲ್ಲಿ ಅಭಿವೃದ್ಧಿ ಮಾಡಲಾಗಿದ್ದು, ಅದಕ್ಕಾಗಿ ಡಿಆರ್ಡಿಒ ಮತ್ತು ಐಐಟಿ ಕಾನ್ಪುರಗಳ ಕಾರ್ಯವನ್ನು ಶ್ಲಾಘಿಸಿದರು. ವೈಜ್ಞಾನಿಕ, ತಾಂತ್ರಿಕ ಸುಧಾರಣೆಗಳ ಜೊತೆಗೆ ಭಾರತ ಸಾಗುತ್ತಿದ್ದು, ರಕ್ಷಣಾ ಸಚಿವಾಲಯವು ಇದರಲ್ಲಿ ಮುಂಚೂಣಿಯಲ್ಲಿದೆ. ಇದೊಂದು ಪ್ರಮುಖ ಉಪಕ್ರಮವಾಗಿದೆ ಎಂದು ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ವಿಜ್ಞಾನ ಮತ್ತು ತಂತ್ರಜ್ಞಾನ ಕ್ಷೇತ್ರದಲ್ಲಿ ಜಗತ್ತು ಪ್ರಗತಿ ಸಾಧಿಸುತ್ತಿದೆ. ಕೃತಕ ಬುದ್ಧಿಮತ್ತೆಯನ್ನು ಎಲ್ಲಾ ಕ್ಷೇತ್ರಗಳಲ್ಲಿಯೂ ಬಳಕೆ ಮಾಡಲಾಗುತ್ತದೆ. ಸಾರ್ವಜನಿಕರ ಕುಂದುಕೊರತೆಗಳನ್ನು ಪಾರದರ್ಶಕವಾಗಿ, ಪರಿಣಾಮಕಾರಿಯಾಗಿ ಬಗೆಹರಿಸುವ ನಿಟ್ಟಿನಲ್ಲಿ ಈ ಅಪ್ಲಿಕೇಶನ್ ಸಹಕಾರಿಯಾಗಿರಲಿದೆ ಎಂದು ರಾಜನಾಥ್ ಸಿಂಗ್ ನುಡಿದಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.