ನವದೆಹಲಿ: ಸಂಭಾವ್ಯ ಕೊರೋನಾ ಮೂರನೇ ಅಲೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಆಸ್ಪತ್ರೆಗಳಲ್ಲಿ ಮಕ್ಕಳ ಆರೈಕೆಗಾಗಿ ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸಲು ತುರ್ತು ಗಮನ ಹರಿಸುವಂತೆ ರಾಜ್ಯ ಸರ್ಕಾರಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
ಕೇಂದ್ರ ಆರೋಗ್ಯ ಇಲಾಖೆ ರಾಜ್ಯ ಸರ್ಕಾರಗಳಿಗೆ ಆರೋಗ್ಯ ಮೂಲಸೌಕರ್ಯಗಳ ಅಭಿವೃದ್ಧಿ, ಆಮ್ಲಜನಕ ಪೂರೈಕೆ ಮತ್ತು ಮಕ್ಕಳ ಆರೈಕೆಗಾಗಿ ಸಾಕಷ್ಟು ಪ್ರಮಾಣದಲ್ಲಿ ಹಾಸಿಗೆಗಳನ್ನು ಖಾತ್ರಿ ಪಡಿಸಿಕೊಳ್ಳುವಂತೆ ಸೂಚಿಸಿದೆ. ಜುಲೈ 2021 ರಿಂದ 2022 ರ ಮಾರ್ಚ್ ವರೆಗೆ ಸಂಬಂಧಿಸಿದಂತೆ 23,123 ಕೋಟಿ ರೂ. ವೆಚ್ಚದಲ್ಲಿ ಮೂಲಸೌಕರ್ಯ ಅಭಿವೃದ್ಧಿ ಯೋಜನೆಗಳ ಅನುಷ್ಠಾನಕ್ಕಾಗಿ ಪ್ರಧಾನಿ ಮೋದಿ ಅವರು ಈ ಹಿಂದೆಯೇ ಅನುಮೋದನೆಯನ್ನೂ ನೀಡಿದ್ದಾರೆ.
ಹಾಗೆಯೇ ಪೀಡಿಯಾಟ್ರಿಕ್ ಕೋವಿಡ್ 19 ನಿರ್ವಹಣೆಯ ಅಗತ್ಯಗಳಿಗೆ ಸಂಬಂಧಿಸಿದಂತೆ ಸ್ಪಂದನೆ ನೀಡಲು ದೇಶದ 736 ಜಿಲ್ಲೆಗಳಲ್ಲಿ ಮೀಸಲಾದ ಮಕ್ಕಳ ಆರೈಕೆ ಘಟಕಗಳನ್ನು ಸ್ಥಾಪಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಕೇಂದ್ರ ಸರ್ಕಾರ ತಿಳಿಸಿದೆ. ಹಾಗೆಯೇ ಸಾರ್ವಜನಿಕ ಆರೋಗ್ಯ ವ್ಯವಸ್ಥೆಗೆ ಅನುಕೂಲವಾಗುವಂತೆ ಆಮ್ಲಜನಕ ಲಭ್ಯತೆ ಹೆಚ್ಚಿಸಲು ಕನಿಷ್ಠ ಜಿಲ್ಲೆಗೊಂದರಂತೆ 1050 ದ್ರವ ವೈದ್ಯಕೀಯ ಆಮ್ಲಜನಕ ಶೇಖರಣಾ ಟ್ಯಾಂಕ್, ವೈದ್ಯಕೀಯ ಅನಿಲ ಪೈಪ್ಲೈನ್ ವ್ಯವಸ್ಥೆ ಹೊಂದಲು ಯೋಜನೆ ರೂಪಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.