ಶ್ರೀನಗರ: ಜುಲೈ 21 ರ ಬಕ್ರೀದ್ ಸಂದರ್ಭದಲ್ಲಿ ಕಣಿವೆ ರಾಜ್ಯ ಜಮ್ಮು ಕಾಶ್ಮೀರದಾದ್ಯಂತ ಹಸು, ಕರು, ಒಂಟೆಗಳ ಹತ್ಯೆ ನಿಷೇಧಿಸಿ ಅಲ್ಲಿನ ಆಡಳಿತ ಆದೇಶ ಹೊರಡಿಸಿದೆ.
ರಾಜ್ಯದ ಪ್ರಾಣಿ ಸಾಕಾಣಿಕೆ ಮತ್ತು ಮೀನುಗಾರಿಕೆ ಇಲಾಖೆಯ ಯೋಜನಾ ನಿರ್ದೇಶಕರು ಈ ಆದೇಶವನ್ನು ಹೊರಡಿಸಿದ್ದಾರೆ. ಆಕಳು, ಕರು, ಹೋರಿ, ಎತ್ತು, ಒಂಟೆಗಳ ಹತ್ಯೆ ನಿಷೇಧದ ಬಗೆಗಿನ ಆದೇಶದ ಪ್ರತಿಯನ್ನು ಅಲ್ಲಿನ ವಿಭಾಗೀಯ ಆಯುಕ್ತರು, ಐಜಿಪಿಗಳಿಗೆ ರವಾನಿಸಲಾಗಿದೆ.
ಬಕ್ರೀದ್ ಆಚರಣೆಯ ಸಂದರ್ಭದಲ್ಲಿ ರಾಜ್ಯಾದ್ಯಂತ ಹೆಚ್ಚಿನ ಪ್ರಮಾಣದಲ್ಲಿ ಪ್ರಾಣಿಗಳ ಹತ್ಯೆ ನಡೆಯುವ ಸಂಭವವಿದೆ. ಈ ಹಿನ್ನೆಲೆಯಲ್ಲಿ ಪ್ರಾಣಿ ಕಲ್ಯಾಣ ಕಾನೂನುಗಳನ್ನು ಕಟ್ಟುನಿಟ್ಟಾಗಿ ಜಾರಿಗೆ ತರುವುದಕ್ಕೆ ಅಗತ್ಯ ಮುನ್ನೆಚ್ಚರಿಕೆಗಳನ್ನು ಜಾರಿಗೊಳಿಸುವಂತೆ ಸೂಚಿಸಲಾಗಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.